ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 9ಕ್ಕೆ ಏರಿಕೆ, ಓರ್ವ ಅರೆಸ್ಟ್

Prasthutha|

ಕೋಲ್ಕತ್ತಾ: ಪರಗಣ ಜಿಲ್ಲೆಗೆ ಸೇರಿದ ದತ್ತಪುಕುರ್​ ದಲ್ಲಿ ಪಟಾಕಿ ತಯಾರಿಸುವ ಕಾರ್ಖಾನೆಯಲ್ಲಿ ನಿನ್ನೆ (ಭಾನುವಾರ) ಭಾರಿ ಸ್ಫೋಟ ಸಂಭವಿಸಿದ್ದು, ಕೊಳದಲ್ಲಿ ಮತ್ತೊಂದು ಮೃತದೇಹ ಪತ್ತೆಯಾದ ಹಿನ್ನೆಲೆ ಸಾವಿನ ಸಂಖ್ಯೆ 9ಕ್ಕೆ ಏರಿಕೆ ಆಗಿದೆ.

- Advertisement -

ಇನ್ನೂ ಹಲವು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿ ಅಕ್ರಮ ಪಟಾಕಿ ಕಾರ್ಖಾನೆ ಮಾಲೀಕರ ಪಾಲುದಾರ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

- Advertisement -

ತಲೆಯಿಲ್ಲದ ದೇಹ ಕೊಳದಲ್ಲಿ ಸಿಕ್ಕಿದ್ದು, ತಲೆಯು ಪಕ್ಕದ ಮನೆಯ ಅಂಗಳದಿಂದ ಪತ್ತೆಯಾಗಿದೆ, ಸ್ಫೋಟದ ಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಂದು ಕೈ ಮತ್ತು ಎರಡು ಬೆರಳುಗಳು ಸಹ ಕಂಡು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp