Home ಟಾಪ್ ಸುದ್ದಿಗಳು ಮತದಾನದ ಕುರಿತು ಜಾಗೃತಿ ಮೂಡಿಸಿ, ಕೋಮುವಾದಿ ಬಿಜೆಪಿಯನ್ನು ಸೋಲಿಸಬೇಕು: ಅಬ್ದುಲ್ ಲತೀಫ್ ಪುತ್ತೂರು

ಮತದಾನದ ಕುರಿತು ಜಾಗೃತಿ ಮೂಡಿಸಿ, ಕೋಮುವಾದಿ ಬಿಜೆಪಿಯನ್ನು ಸೋಲಿಸಬೇಕು: ಅಬ್ದುಲ್ ಲತೀಫ್ ಪುತ್ತೂರು

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ ಕ್ಷೇತ್ರಾಧ್ಯಕ್ಷ ಮೂನಿಶ್ ಅಲಿ ಯವರ ಅಧ್ಯಕ್ಷತೆಯಲ್ಲಿ ಸಮುದಾಯ ಭವನ ಗೂಡಿನಬಳಿಯಲ್ಲಿ ನಡೆಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಮೂನಿಶ್ ಅಲಿ, ಬಂಟ್ವಾಳದಲ್ಲಿ ಪಕ್ಷ  ಬೆಳೆದು ಬಂದ  ಹಾದಿಯನ್ನು ವಿವರಿಸುತ್ತಾ ಕಾರ್ಯಕರ್ತರ ತ್ಯಾಗ, ಅನುಸರನೆ ಮತ್ತು ಬದ್ಧತೆಯನ್ನು ಸ್ಮರಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ರವರು ಇಂದಿನ ರಾಜಕೀಯ ಸನ್ನಿವೇಶವನ್ನು ವಿವರಿಸುತ್ತಾ ಮೋದಿಯ ನಿರಂಕುಶಾಧಿಕಾರ ಮತ್ತು ಬಿ ಜೆ ಪಿ ಪಕ್ಷದ ದುರಾಡಳಿತದಿಂದ ದೇಶ ದಿವಾಳಿಯತ್ತ ಸಾಗುತ್ತಿರುವವಾಗ ಸಂಘ ಪರಿವಾರ ಪ್ರೇರಿತ ಬಿ ಜೆ ಪಿ ಕೈಯಿಂದ ಈ ಭವ್ಯ ಭಾರತವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸುತ್ತಾ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಜಾಗೃತಿ ಮೂಡಿಸಿ  ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಪಣತೊಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಜಿಲ್ಲಾ  ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಸಮಾರೋಪ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಮದ್ದ, ಬಶೀರ್ ಬೊಳ್ಳಾಯಿ, ಕ್ಷೇತ್ರ ಸಮಿತಿ ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ, ಕ್ಷೇತ್ರ ಸಮಿತಿ ಉಪಾಧ್ಯಕ್ಷ ಅನ್ವರ್ ಬಡಕಬೈಲ್ ಉಪಸ್ಥಿತರಿದ್ದರು.

ಅಶ್ರಫ್ ತಲಪಾಡಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.

Join Whatsapp
Exit mobile version