ಬೆಳೆ ನಷ್ಟ ಭರಿಸ್ತೀವಿ, ಆದರೆ ಪೂರ್ಣ ಪ್ರಮಾಣದಲ್ಲಿ ಅಸಾಧ್ಯ: ಸಿದ್ದರಾಮಯ್ಯ

Prasthutha|

ಬೆಂಗಳೂರು: ರಾಜ್ಯದ ಶೇ. 90ರಷ್ಟು ತಾಲೂಕುಗಳಲ್ಲಿ ಬರಗಾಲ ಎದುರಾಗಿದೆ. ರೈತರು ಬೆಳೆ ವಿಮೆ ಮಾಡಿಸಿದ್ದರೂ ಪೂರ್ಣಪ್ರಮಾಣದ ನಷ್ಟ ಭರಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -

ರಾಜ್ಯದಲ್ಲಿ ಬರದಿಂದ ಈ ಸಲ ಸುಮಾರು 33 ಸಾವಿರ ಕೋಟಿ ರೂ.ನಷ್ಟ ಉಂಟಾಗಿದೆ. ಕೇಂದ್ರ ಸರಕಾರದ ಅಧೀನದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಮಾರ್ಗಸೂಚಿ ಪ್ರಕಾರ 17,900 ಕೋಟಿ ರೂ. ಪರಿಹಾರ ಕೇಳಲಾಗಿದೆ. ಇದು ಬಿಡುಗಡೆಯಾದರೂ ಇನ್ನೂ 16 ಸಾವಿರ ಕೋಟಿ ರೂ. ರೈತರಿಗೆ ನಷ್ಟ ಆಗುತ್ತದೆ. ಹಾಗಾಗಿ ಬರದಿಂದಾದ ನಷ್ಟಕ್ಕೆ ಸರಕಾರ ಸಹಾಯಧನ ನೀಡಬಹುದೇ ಹೊರತು, ನಷ್ಟವನ್ನು ಸಂಪೂರ್ಣವಾಗಿ ಭರಿಸುತ್ತೇವೆ ಎನ್ನಲಾಗದು ಎಂದು ಹೇಳಿದರು.

ಹಲವು ದಶಕಗಳ ರಾಜಕೀಯ ಅನುಭವದಿಂದ ಹೇಳುತ್ತೇನೆ. ಪ್ರತಿ ನಾಲ್ಕೈದು ವರ್ಷಕ್ಕೊಮ್ಮೆ ರಾಜ್ಯಕ್ಕೆ ಬರ ಎದುರಾಗುತ್ತಲೇ ಇದೆ. ಇದರ ಪರಿಣಾಮವಾಗಿ ವರ್ಷದಿಂದ ವರ್ಷಕ್ಕೆ ಕೃಷಿಯಿಂದ ವಿಮುಖರಾಗುವವರ ಸಂಖ್ಯೆ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಕೃಷಿ ಲಾಭದಾಯಕವಾಗಿ ಮಾಡುವ ಮೂಲಕ ರೈತರ ಬದುಕು ಹಸನುಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾನಿಲಯಗಳು ಕೇವಲ ಪದವೀಧರರನ್ನು ತಯಾರು ಮಾಡುವ ಸಂಸ್ಥೆಯಾಗದೆ, ಸಂಶೋಧನೆಗೆ ಒತ್ತು ನೀಡಬೇಕು. ಇದಕ್ಕೆ ಅನುದಾನ ಸಹಿತ ಎಲ್ಲ ರೀತಿಯ ಸಹಕಾರ ನೀಡಲು ಸರಕಾರ ಬದ್ಧವಾಗಿದೆ ಎಂದು ಭರವಸೆಯನ್ನು ಸಿಎಂ ನೀಡಿದರು.

Join Whatsapp