ಕರ್ನಾಟಕ ಮತ್ತು ಬೆಂಗಳೂರು ಬಂದ್​ನಿಂದ ರಾಜ್ಯಕ್ಕೆ ಉಂಟಾದ ನಷ್ಟವೆಷ್ಟು ಗೊತ್ತೇ?

Prasthutha|

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವತ್ತಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು, ರೈತರು, ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ.

- Advertisement -

ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ವಿವಿಧ ಸಂಘಟನೆಗಳು ಒಂದೇ ವಾರದಲ್ಲಿ ಬೆಂಗಳೂರು ಮತ್ತು ಕರ್ನಾಟಕ ಬಂದ್​ಗೆ ಕರೆ ನೀಡಿದ್ದವು. ಇದರಿಂದ ಸರ್ಕಾರಕ್ಕೆ ಕೋಟಿ ಕೋಟಿ ರೂ. ನಷ್ಟವಾಗಿದೆ.
ವಾರದಲ್ಲಿ ಎರಡು, ಎರಡು ಬಂದ್ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳಿಗೆ, ಹೋಟೆಲ್‌ಗಳಿಗೆ ಭಾರೀ ನಷ್ಟ ಉಂಟಾಗಿವೆ.

ಕಾವೇರಿ ನೀರಿಗಾಗಿ ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿತ್ತು. ಶುಕ್ರವಾರದ ಕರ್ನಾಟಕ ಬಂದ್​​ ನಡೆಸಿದ ಹಿನ್ನೆಲೆಯಲ್ಲಿ ಬಿಎಂಟಿಸಿ, ಕೆಎಸ್ಆರ್​​ಟಿಸಿ ಹಾಗೂ ಮೆಟ್ರೋ ನಿಗಮಕ್ಕೆ ಕೋಟ್ಯಾಂತರ ರುಪಾಯಿ ನಷ್ಟವಾಗಿದೆ. ಮಂಗಳವಾರ ಮತ್ತು ಶುಕ್ರವಾರ ಕೆಎಸ್ಆರ್ಟಿಸಿ ಬಿಎಂಟಿಸಿ ಮತ್ತು ‌ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ತೀರ ‌ಕಡಿಮೆ ಇತ್ತು. ಈ ಹಿನ್ನೆಲೆಯಲ್ಲಿ ಮೂರು ನಿಗಮಗಳಿಗೆ ಅಂದಾಜು 15 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಮೂರು ನಿಗಮಗಳ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಮೆಟ್ರೋ ಒಂದು ದಿನದ ಆದಾಯ- 1.6 ರಿಂದ 1.7 ಕೋಟಿ ರೂ., ಕೆಎಸ್ಆರ್​​ಟಿಸಿಗೆ 9 ರಿಂದ 10 ಕೋಟಿ ರೂ. ಹಾಗೂ ಬಿಎಂಟಿಸಿಗೆ 4 ರಿಂದ 5 ಕೋಟಿ ರೂ. ಆದಾಯ ಹರಿದು ಬರುತ್ತಿತ್ತು. ಆದರೆ ಬಂದ್​​ನಿಂದ ಸಾಕಷ್ಟು ನಷ್ಟವಾಗಿದೆ.

ಬೆಂಗಳೂರಿನಲ್ಲಿ ಸುಮಾರು ಐದು ಸಾವಿರ ಹೋಟೆಲ್​ಗಳಿವೆ. ಮಂಗಳವಾರ ಮತ್ತು ಶುಕ್ರವಾರದ ಬಂದ್ ನಿಂದ ಅಂದಾಜು 100 ರಿಂದ 120 ಕೋಟಿ ರುಪಾಯಿ ಲಾಸ್​ ಆಗಿದೆ. ಬೆಂಗಳೂರು ಹೊರತು ಪಡಿಸಿ ರಾಜ್ಯದಲ್ಲಿ 10 ಸಾವಿರ ಹೋಟೆಲ್​ಗಳಿವೆ. ಶುಕ್ರವಾರದ ಬಂದ್​ನಿಂದ ಅಂದಾಜು 150 ರಿಂದ 160 ಕೋಟಿ ರೂ. ನಷ್ಟವಾಗಿದೆ ಎಂದು ಹೊಟೇಲ್​ ಮತ್ತು ಮದ್ಯ ಮಾರಾಟಗಾರರ ಅಸೋಸಿಯೇಷನ್ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಒಟ್ಟು 3850 ಮದ್ಯ ಮಾರಾಟ ಅಂಗಡಿಗಳಿವೆ. ಮಂಗಳವಾರ ಮತ್ತು ಶುಕ್ರವಾರದ ಬಂದ್​ನಿಂದ ಅಂದಾಜು 180 ರಿಂದ 200 ಕೋಟಿ ರೂಪಾಯಿ ವಹಿವಾಟು ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.

Join Whatsapp