ಎಸ್ ಡಿಪಿಐ ಕಾರ್ಯಕರ್ತನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

Prasthutha|

ಕಣ್ಣೂರು: ಎಸ್ ಡಿಪಿಐ ಕಾರ್ಯಕರ್ತನ ನಿವಾಸದ ಮೇಲೆ ದುಷ್ಕರ್ಮಿಗಳ ತಂಡ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ ಘಟನೆ ಕಣ್ಣೂರಿನಲ್ಲಿ ನಡೆದಿದೆ.

- Advertisement -

ಭಾನುವಾರ ಬೆಳಗ್ಗಿನ ಜಾವ 1.30ರ ಸುಮಾರಿಗೆ ಪನೂರ್ ಎಂಬಲ್ಲಿನ ಅಜ್ಮಲ್ ಎಂಬ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್ ಡಿಪಿಐ ಕಾರ್ಯಕರ್ತನ ಮನೆ ಮೇಲೆ ಈ ದಾಳಿ ನಡೆದಿದೆ. ದಾಳಿಯಿಂದ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಆದರೆ ಮನೆಗೆ ಸ್ವಲ್ಪ ಪ್ರಮಾಣದ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟಕ ಕಾಯ್ದೆಯಡಿ 3ರಿಂದ 5 ಮಂದಿಯ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

ಪಿಎಫ್ಐ ನಾಯಕರನ್ನು ಬಂಧಿಸಿದ್ದನ್ನು ವಿರೋಧಿಸಿ ಕೇರಳದಾದ್ಯಂತ ಹರತಾಳ ಆಚರಿಸಿದ ಬೆನ್ನಲ್ಲೇ ಈ ದಾಳಿ ನಡೆದಿದೆ.

Join Whatsapp