ಸಿ.ಟಿ ರವಿಗೆ ಕಿಡ್ನಿ ಸಮಸ್ಯೆ ಆಸ್ಪತ್ರೆಗೆ ದಾಖಲು

Prasthutha|

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಅನಾರೋಗ್ಯದಿಂದ ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಮಧ್ಯರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರುಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಆಶ್ರಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ.


ಸಿ.ಟಿ ರವಿ ಅವರಿಗೆ ಕಿಡ್ನಿಯಲ್ಲಿ ಕಲ್ಲು ಕಾಣಿಸಿಕೊಂಡಿತ್ತು. ಕಳೆದ 15 ದಿನಗಳಿಂದಲೂ ಆಸ್ಪತ್ರೆ ಸೇರಿದ್ದ ಅವರು, ಲಿಂಗಾಯತ ಸಮಾವೇಶಕ್ಕೂ ಗೈರಾಗಿ, ವೀಡಿಯೋ ಮೂಲಕ ಮತಯಾಚನೆ ಮಾಡಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಚಿಕಿತ್ಸೆಗಾಗಿ ಮತ್ತೆ ಆಸ್ಪತ್ರೆ ಸೇರಿದ್ದಾರೆ.

Join Whatsapp