Home ಟಾಪ್ ಸುದ್ದಿಗಳು ತೈಲ ದರ ಏರಿಕೆ ಖಂಡಿಸಿ ಸೈಕಲ್ ಜಾಥಾ: ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ವಶಕ್ಕೆ

ತೈಲ ದರ ಏರಿಕೆ ಖಂಡಿಸಿ ಸೈಕಲ್ ಜಾಥಾ: ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ವಶಕ್ಕೆ

ಬೆಂಗಳೂರು: ತೈಲ ದರ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ರಸ್ತೆಗಿಳಿದಿದ್ದಾರೆ. ಇಂದು ನಗರದ ಬಿಜೆಪಿ ಕಚೇರಿಯಿಂದ ವಿಧಾನಸೌಧದ ವರೆಗೆ ನಾಯಕರು ಸೈಕಲ್ ಜಾಥಾ ನಡೆಸಿದ್ದು, ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಶಾಸಕರಾದ ಅಶ್ವಥ್ ನಾರಾಯಣ್, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ.

ಇಂದು ಬೆಳಗ್ಗೆ 9:30 ಕ್ಕೆ ಬಿಜೆಪಿ ಕಚೇರಿಯಿಂದ ವಿಧಾನಸೌಧದ ವರೆಗೆ ಸೈಕಲ್ ಜಾಥಾ ಆರಂಭಿಸಲಾಯಿತು. ವಿಜಯೇಂದ್ರ ನೇತೃತ್ವದಲ್ಲಿ ಸೈಕಲ್ ಏರಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬಿಜೆಪಿ ನಾಯಕರು ಮುಂದಾದರು. ಆದರೆ ಬಿಜೆಪಿ ಕಚೇರಿ ಮುಂಭಾಗದಲ್ಲೇ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು.

Join Whatsapp
Exit mobile version