ಡಿ. 6ರ ನಂತರ ಮುಂದಿನ ನಡೆ ಬಗ್ಗೆ ಹೇಳುತ್ತೇನೆ: ವಿ ಸೋಮಣ್ಣ

Prasthutha|

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ ವೈ ವಿಜಯೇಂದ್ರ ನೇಮಕದ ಬಳಿಕ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಡಿಸೆಂಬರ್ 6ರ ನಂತರ ನನ್ನ ನಿರ್ಧಾರವನ್ನು ತಿಳಿಸುತ್ತೇನೆ. ಎಂದು ಹೇಳಿದ್ದಾರೆ.

- Advertisement -


ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಯಾವ ರೀತಿ ನನಗೆ ಹೊಡೆತ ಆಗಿದೆ ಎಂಬುದನ್ನು ವಿವರಿಸುತ್ತೇನೆ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಲ್ಲ ಎಂದು ಪರೋಕ್ಷವಾಗಿ ಸ್ವಪಕ್ಷದ ನಾಯಕರ ವಿರುದ್ಧ ಅದರಲ್ಲೂ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧವಾಗ್ದಾಳಿ ನಡೆಸಿದ್ದಾರೆ. ಎಲ್ಲಾ ಒಳ ಒಪ್ಪಂದವಾಗಿದೆ, ಯಾರು ಆತುರ ಪಡಬೇಡಿ ಎಂದು ಕಾರ್ಯಕರ್ತರಿಗೆ ಸೋಮಣ್ಣ ಕಿವಿಮಾತು ಹೇಳಿದ್ದಾರೆ.

Join Whatsapp