ದ.ಕ. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ದಿಢೀರ್ ವರ್ಗಾವಣೆ

Prasthutha|

ಮಂಗಳೂರು: ನಗರದ ಜೆಪ್ಪುನಲ್ಲಿರುವ ಜೆರೋಸಾ ಶಾಲೆಯಲ್ಲಿ‌‌ ನಡೆದ ವಿವಾದದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕರನ್ನು ಬೆಳಗಾವಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯಕ್ಕೆ ದಿಢೀರ್ ವರ್ಗಾವಣೆ ಮಾಡಲಾಗಿದೆ.

- Advertisement -

ನೂತನ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾಗಿ ವೆಂಕಟೇಶ ಸುಬ್ರಾಯ ಪಟಗಾರ ಎಂಬವರನ್ನು ನೇಮಕ ಮಾಡಲಾಗಿದೆ.

ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆ ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಆರೋಪ ಕೇಳಿ ಬಂದು ವಿವಾದವಾಗಿದ್ದು, ಶಿಕ್ಷಣ ಇಲಾಖೆ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿತ್ತು ಎನ್ನಲಾಗಿದೆ. ಜೊತೆಗೆ ಸ್ಥಳೀಯ ಶಾಸಕ ವೇದವ್ಯಾಸ ಕಾಮತ್ ಹೇಳಿದಂತೆ ಡಿಡಿಪಿಐ ಕ್ರಮ ಕೈಗೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಕಾಂಗ್ರೆಸ್ ನಿಯೋಗ ನಿನ್ನೆ ಜೆರೋಸಾ ಸಂಸ್ಥೆಗೆ ಭೇಟಿ ನೀಡಿದ ವೇಳೆ ಡಿಡಿಪಿಐ ವಿರುದ್ಧ ಅಸಮಾಧಾನ ಹೊರ ಹಾಕಿತ್ತು. ಮಾಜಿ ಸಚಿವ ರಮಾನಾಥ್ ರೈ, ಸಮಸ್ಯೆ ಸರಿಪಡಿಸದ ಶಿಕ್ಷಣ ಇಲಾಖೆಯೇ ಜವಾಬ್ದಾರಿಯಾಗುತ್ತೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಡಿಡಿಪಿಐ ಅವರನ್ನು ಇದೀಗ ದಿಢೀರ್ ವರ್ಗಾವಣೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Join Whatsapp