ದ.ಕ. ಜಿಲ್ಲೆಯ ಮರಳು ಸಮಸ್ಯೆ ಬಗೆಹರಿಸಲು ಗೃಹ ಸಚಿವರಿಗೆ ಇನಾಯತ್ ಅಲಿ ಮನವಿ

Prasthutha|

ಶೀಘ್ರವೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಸಚಿವರು

- Advertisement -

ಮಂಗಳೂರು: ದ.ಕ. ಜಿಲ್ಲೆಯ ಮರಳು ಸಮಸ್ಯೆಯ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಗೃಹ ಸಚಿವ ಡಾ. ಜಿ.‌ ಪರಮೇಶ್ವರ್‌ ಜೊತೆ ಚರ್ಚಿಸಿ ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.

- Advertisement -

ಗೃಹ ಸಚಿವರು ಮಂಗಳೂರಿಗೆ ಆಗಮಿಸಿದ ಸಂದರ್ಭ ಈ ವಿಚಾರವಾಗಿ ಚರ್ಚೆ ನಡೆಸಿದ ಇನಾಯತ್ ಅಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ತಿಂಗಳಿಂದ ಮರಳು ಸಮಸ್ಯೆ ಉಂಟಾಗುತ್ತಿದ್ದು, ಲಭ್ಯವಿರುವ ಮರಳಿಗೆ ದುಬಾರಿ ಬೆಲೆ ನೀಡಬೇಕಾಗಿದೆ. ಇದರಿಂದ ಜಿಲ್ಲೆಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಮರಳು ಖರೀದಿ ಅಸಾಧ್ಯವಾಗಿದೆ. ಈ ಕಾರಣದಿಂದ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳು ಹಲವೆಡೆ ಸ್ಥಗಿತಗೊಂಡಿದೆ ಎಂದು ಸಚಿವರ ಗಮನಕ್ಕೆ ತಂದಿದ್ದಾರೆ.

ಈ ಬಗ್ಗೆ ತಕ್ಷಣವೇ ಸ್ಪಂದಿಸಿದ ಗೃಹ ಸಚಿವರು ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗಳಿಗೆ ಹಾಗೂ ಪೊಲೀಸ್ ಆಯುಕ್ತರಿಗೆ ಸೂಕ್ತ ಕ್ರಮಕೈಗೊಂಡು ಸಮಸ್ಯೆ ಬಗೆಹರಿಸುವಂತೆ ಸೂಚಿಸಿದ್ದಾರೆ.

Join Whatsapp