ಬಿಜೆಪಿಗೆ ಸೇರಲು ನಿರಾಕರಿಸಿದ್ದಕ್ಕೆ ನನ್ನನ್ನು ತಿಹಾರ ಜೈಲಿಗೆ ಹಾಕಿದರು: ಡಿ ಕೆ ಶಿವಕುಮಾರ್

Prasthutha|

ಬೆಳಗಾವಿ: ಬಿಜೆಪಿ ಸೇರಲು ನಿರಾಕರಿಸಿದ್ದಕ್ಕೆ ನನ್ನನ್ನು ತಿಹಾರ ಜೈಲಿಗೆ ಹಾಕಿದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಏನು ತಪ್ಪು ಮಾಡಿ ತಿಹಾರ್ ಜೈಲಿಗೆ ಹೋಗಿದ್ದರು ಎಂದು ಸಚಿವ ಈಶ್ವರಪ್ಪ ಪ್ರಶ್ನಿಸಿದ್ದಾರೆ. ನೀವು ಕಳಿಸಿದ್ದಕ್ಕೆ ನಾನು ತಿಹಾರ ಜೈಲಿಗೆ ಹೋದೆ. ನಿಮ್ಮನ್ನು ಬೆಂಬಲಿಸಲಿಲ್ಲ ಎಂಬ ಕಾರಣಕ್ಕೆ, ಬಿಜೆಪಿ ಸೇರಲಿಲ್ಲ ಎನ್ನುವ ಕೋಪಕ್ಕೆ ನನ್ನನ್ನು ಜೈಲಿಗೆ ಹಾಕಿದರು. ಈ ಬಗ್ಗೆ ಎಲ್ಲವೂ ರೆಕಾರ್ಡ್ ಇದೆ ಎಂದು ಡಿಕೆಶಿ ತಿರುಗೇಟು ನೀಡಿದರು.

Join Whatsapp