ಅ.22ರಂದು SDPI ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿಗಳ ಸಮಾವೇಶ

Prasthutha|

ಮಂಗಳೂರು : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -SDPI ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿಗಳ ಸಮಾವೇಶವು ಅಕ್ಟೋಬರ್ 22 ರಂದು ಬಂಟ್ವಾಳ ತಾಲೂಕಿನ ಸಾಗರ್ ಅಡಿಟೋರಿಯಂ ನಲ್ಲಿ ನಡೆಯಲಿದೆ

- Advertisement -


2018-21 ರ ಅವಧಿಯ ಕೊನೆಯ ಸಮಾವೇಶವಾಗಿದ್ದು ಪಕ್ಷದ ರಾಜ್ಯಾಧ್ಯಕ್ಷರ ಅಬ್ದುಲ್ ಹನ್ನಾನ್, ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು, ಜಿಲ್ಲಾ ಪ್ರತಿನಿಧಿಗಳು,ವಿಶೇಷ ಆಹ್ವಾನಿತರು ಭಾಗವಹಿಸಲಿದ್ದಾರೆ
ಪ್ರತೀ ಮೂರು ವರ್ಷಗಳಿಗೊಮ್ಮೆ ನಡೆಯುವ ಈ ಸಭೆಯಲ್ಲಿ ಮುಂದಿನ ಅವಧಿಗೆ ಹೊಸ ಜಿಲ್ಲಾ ಪದಾಧಿಕಾರಿಗಳ ಹಾಗೂ ಕಾರ್ಯಕಾರಿಣಿ ಸಮಿತಿಯ ಆಯ್ಕೆ ಅಂತರಿಕ ಚುನಾವಣೆ ಮೂಲಕ ನಡೆಯಲಿದೆ ಎಂದು ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp