ದೆಹಲಿ: ನೀಟ್ (NEET) ಪರೀಕ್ಷೆ ಅಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಸಂಸತ್ ಚಲೋ ಅಭಿಯಾನದ ಪ್ರಯುಕ್ತ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿವಿ ನೇತೃತ್ವದಲ್ಲಿ ದೆಹಲಿಯಲ್ಲಿ ಧರಣಿ ನಡೆಯಿತು.
ಕರ್ನಾಟಕದಿಂದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಳಪಾಡ್ ನೇತೃತ್ವದಲ್ಲಿ ಎಲ್ಲಾ ಜಿಲ್ಲೆಗಳ ಯುವ ಕಾಂಗ್ರೆಸ್ ಪದಾಧಿಕಾರಿಗಳು ಧರಣಿಯಲ್ಲಿ ಭಾಗವಹಿಸಿದ್ದರು.
ದಕ್ಷಿಣ ಕನ್ನಡದಿಂದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಗಿರೀಶ್ ಆಳ್ವ , ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ , ಮುಲ್ಕಿ ಯುವಕಾಂಗ್ರೆಸ್ ಅಧ್ಯಕ್ಷ ಅಶೋಕ್ ಹಾಗು ಬೆಳ್ತಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಸ್ ಕೆ ಹಕೀಮ್ ಕೊಕ್ಕಡ ಭಾಗವಹಿಸಿದ್ದರು.
ಧರಣಿಯಲ್ಲಿ ಭಾಗವಹಿಸಿದ ಎಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ಪೊಲೀಸ್ ಬಂಧಿಸಿ ಬಿಡುಗಡೆ ಮಾಡಿದರು.
![](https://prasthutha.com/wp-content/uploads/2024/06/image-11-768x1024.png)
![](https://prasthutha.com/wp-content/uploads/2024/06/image-12-768x1024.png)
![](https://prasthutha.com/wp-content/uploads/2024/06/image-13-1024x768.png)