Home ಟಾಪ್ ಸುದ್ದಿಗಳು ದಲಿತ ಹೋರಾಟಗಾರ ಜಿಗಣಿ ಶಂಕರ್ ನಿಧನ

ದಲಿತ ಹೋರಾಟಗಾರ ಜಿಗಣಿ ಶಂಕರ್ ನಿಧನ

ಆನೇಕಲ್: ಕರ್ನಾಟಕ ರಿಪಬ್ಲಿಕ್ ಸೇನೆಯ ರಾಜ್ಯಾಧ್ಯಕ್ಷರೂ ಆಗಿದ್ದ ಹಿರಿಯ ಹೋರಾಟಗಾರ, ದಲಿತ ಪರ ಹೋರಾಟದ ಮುಂಚೂಣಿ ನಾಯಕರಲ್ಲಿ ಒಬ್ಬರಾದ ಜಿಗಣಿ ಶಂಕರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.


ವಿಚಾರವಾದಿ ಎಂದು ಖ್ಯಾತರಾಗಿದ್ದ ಜಿಗಣಿ ಶಂಕರ್ ಜಿಗಣಿ ಬಳಿಯ ಬಂಡೇನಲ್ಲಸಂದ್ರ ಗ್ರಾಮದ ನಿವಾಸಿ. ಅವರು ಖಾಸಗಿ ಕಾರ್ಯಕ್ರಮವೊಂದರ ನಿಮಿತ್ತ ಕೋಲಾರಕ್ಕೆ ಹೋಗಿದ್ದಾಗ ಹೃದಯಾಘಾತ ಸಂಭವಿಸಿದೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಜಿಗಣಿ ಬಳಿಯ ಬಂಡೇನಲ್ಲಸಂದ್ರ ಗ್ರಾಮದ ನಿವಾಸದ ಬಳಿ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಬಂಡೇನಲ್ಲಸಂದ್ರ ಗ್ರಾಮದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಿರುವುದಾಗಿ ಕುಟುಂಬಿಕರು ತಿಳಿಸಿದ್ದಾರೆ.


ಜಿಗಣಿ ಶಂಕರ್ ಅವರು ತಮ್ಮ ಬದುಕಿನುದ್ದಕ್ಕೂ ದಲಿತ ಸಂಘಟನೆ ಮತ್ತು ದಲಿತ ಪಕ್ಷಕಟ್ಟಿ ಹೋರಾಟ ಮಾಡಿದವರು.

Join Whatsapp
Exit mobile version