ಠಾಣೆಯಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್‌ ಐ ವಿರುದ್ಧ ಕೇಸ್‌ ದಾಖಲು

Prasthutha|

ಚಿಕ್ಕಮಗಳೂರು : ಇಲ್ಲಿನ ಕಿರಗುಂದ ಗ್ರಾಮದ ದಲಿತ ಯುವಕನೊಬ್ಬನಿಗೆ ಗೋಣಿಬೀಡು ಪೊಲೀಸ್‌ ಠಾಣೆಯಲ್ಲಿ ಮೂತ್ರ ಕುಡಿಸಿದ ಪಿಎಸ್‌ ಐ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

- Advertisement -

ಗೋಣಿಬೀಡು ಪೊಲೀಸ್‌ ಠಾಣೆಯ ಪಿಎಸ್‌ ಐ ಅರ್ಜುನ್‌ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದ ಯುವಕ ಪುನೀತ್‌ ಮೇಲೆ ನಡೆಸಿದ ಅಮಾನವೀಯ ಹಿಂಸೆಗೆ ರಾಜ್ಯಾದ್ಯಂತ ಕನ್ನಡಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಪಿಎಸ್‌ ಐ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯಾದ್ಯಂತ ಒತ್ತಾಯ ಕೇಳಿಬಂದಿತ್ತು.

ಐಪಿಸಿ ಕಲಂ 342, 323, 504 ಸೇರಿದಂತೆ, ಪರಿಶಿಷ್ಟ ಜಾತಿ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಕಲಂಗಳಡಿ ಪಿಎಸ್‌ ಐ ವಿರುದ್ಧ ದಾಖಲಾಗಿದೆ. ತನಿಖೆ ನಡೆಸಿ ಪಿಎಸ್‌ ಐ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹಿರಿ ಪೊಲೀಸ್‌ ಅಧಿಕಾರಿಗಳು ಭರವಸೆ ನೀಡಿದ್ದಾರೆ.

- Advertisement -

ಪುನೀತ್‌ ನನ್ನು ಪ್ರಕರಣವೊಂದಕ್ಕೆ ಸಂಬಂಧಿಸಿ ಠಾಣೆಗೆ ಕರೆದೊಯ್ದು ಅಮಾನವೀಯ ಹಿಂಸೆ ನೀಡಿದ್ದುದಲ್ಲದೆ, ಠಾಣೆಯಲ್ಲಿ ಕಳ್ಳತನ ಆರೋಪದಲ್ಲಿ ಬಂಧಿತನಾಗಿದ್ದ ಇನ್ನೊಬ್ಬ ವ್ಯಕ್ತಿಯ ಮೂತ್ರ ಕುಡಿಸಿದ್ದ ಆರೋಪ ಕೇಳಿಬಂದಿತ್ತು. ಅಲ್ಲದೆ, ನೆಲಕ್ಕೆ ಬಿದ್ದಿದ್ದ ಮೂತ್ರವನ್ನು ನೆಕ್ಕಿಸಿದ್ದ ಆರೋಪವೂ ಕೇಳಿಬಂದಿತ್ತು.

ಈ ವಿಷಯ ವರದಿಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಪಿಎಸ್‌ ಐ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿತ್ತು.

Join Whatsapp