ಉಡುಪಿ ಜಿಲ್ಲಾ ದಲಿತ ಮುಖಂಡ ಸುಂದರ್‌ ಕಪ್ಪೆಟ್ಟು ನಿಧನ

Prasthutha|

ಉಡುಪಿ : ಜಿಲ್ಲೆಯ ಪ್ರಮುಖ ದಲಿತ ಮುಖಂಡರುಗಳಲ್ಲಿ ಒಬ್ಬರಾಗಿದ್ದ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲಾ ಸಂಘಟನಾ ಸಂಚಾಲಕ ಸುಂದರ್‌ ಕಪ್ಪೆಟ್ಟು ನಿಧನರಾಗಿದ್ದಾರೆ. ಕೋವಿಡ್‌ ಸೋಂಕಿನಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

- Advertisement -

ಸುಂದರ್‌ ಕಪ್ಪೆಟ್ಟು ಅವರು ಹಲವು ದಲಿತ ಪರ ಹೋರಾಟಗಳಲ್ಲಿ, ಸಂಘಟನಾ ಚಟುವಟಿಕೆಗಳಲ್ಲಿ ನಿರತರಾಗಿದ್ದವರು. ಅವರು ಭಾರತೀಯ ಜೀವ ವಿಮಾ ನಿಗಮದ ಕುಂದಾಪುರ ಶಾಖೆಯ ಉದ್ಯೋಗಿಯಾಗಿದ್ದರು.

ಕೆಲವು ದಿನಗಳ ಹಿಂದೆ ಕೋವಿಡ್‌ ಸೋಂಕು ದೃಢಪಟ್ಟಿದುದರಿಂದ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದರು.

- Advertisement -

ದಲಿತ ಪರ ಹೋರಾಟಗಳಲ್ಲಿ, ಸಮಾಜಸೇವೆಯಲ್ಲಿ ಸಕ್ರಿಯರಾಗಿದ್ದ ಅವರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ಬಂಧುಬಳಗವನ್ನು ಬಿಟ್ಟು ಅಗಲಿದ್ದಾರೆ.

Join Whatsapp