ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ  ಗೋಮೂತ್ರದಿಂದ ಟ್ಯಾಂಕ್  ಸ್ವಚ್ಛಗೊಳಿಸಿದ ಪ್ರಕರಣ: ಆರೋಪಿ ಬಂಧನ

Prasthutha|

ಚಾಮರಾಜನಗರ : ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಟ್ಯಾಂಕ್ ಖಾಲಿ ಮಾಡಿ ಗೋಮೂತ್ರದಿಂದ ಸ್ವಚ್ಛಗೊಳಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ

- Advertisement -

ಆರೋಪಿ ಮಹದೇವಪ್ಪ (62) ನನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹದೇವಪ್ಪನ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದರು. ಆತನ  ಬಂಧನವಾಗಿರುವುದರಿಂದ ಇದೀಗ ಪ್ರತಿಭಟನೆಯನ್ನು ಕೈ ಬಿಟ್ಟಿದ್ದು, ತಮಗೆ ಪ್ರವೇಶ ನಿರಾಕರಿಸಲಾಗಿದ್ದ ದೇವಸ್ಥಾನ, ಹೊಟೇಲ್‌ಗಳಿಗೆ ಪ್ರವೇಶ ನೀಡುವಂತೆ ದಲಿತರು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರನ್ನು ಒತ್ತಾಯಿಸಿದ್ದಾರೆ.

- Advertisement -

ಮಹದೇವಪ್ಪ ಟ್ಯಾಂಕ್‌ಗೆ ನೀರು ಖಾಲಿ ಮಾಡಿ, ಗೋಮೂತ್ರದಿಂದ ಸ್ವಚ್ಛಗೊಳಿಸಿದ ವಿಡಿಯೋ ವೈರಲ್ ಆಗಿತ್ತು.

Join Whatsapp