ಕೊಪ್ಪಳ | ಅಂರ್ತಜಾತಿ ವಿವಾಹವಾಗಿದ್ದ ದಲಿತ ಯುವತಿಗೆ ವಿಷವುಣಿಸಿ ಕೊಲೆ: 7 ಮಂದಿ ಪೊಲೀಸ್ ವಶಕ್ಕೆ

Prasthutha|

ಕೊಪ್ಪಳ : ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ದಲಿತ ಯುವತಿಯನ್ನು, ಯುವಕನ ಮನೆಯವರು ಮನಬಂದಂತೆ ಹಲ್ಲೆ ನಡೆಸಿ, ಬಳಿಕ ವಿಷ ಹಾಕಿ ಕೊಲೆಗೈದಿರುವುದಾಗಿ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಈವರೆಗೆ ಒಟ್ಟು 7 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

- Advertisement -

ಈ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ನಡೆದಿದ್ದು, ಮಾದಿಗ ಸಮುದಾಯಕ್ಕೆ ಸೇರಿದ ಮರಿಯಮ್ಮ(21) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.


ಮರಿಯಮ್ಮ ಹಾಗೂ ಹನುಮಯ್ಯ ಇಬ್ಬರು ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಹನುಮಯ್ಯ ಎಸ್ ಟಿ ಸಮುದಾಯಕ್ಕೆ ಸೇರಿದ ಯುವಕ. ಅಂತರ್ಜಾತಿಯ ಕಾರಣದಿಂದಾಗಿ ಮರಿಯಮ್ಮ ಹಾಗೂ ಹನುಮಯ್ಯ 2023ರ ಏಪ್ರಿಲ್ ನಲ್ಲಿ ತಮ್ಮ ಕುಟುಂಬದವರನ್ನು ಒಪ್ಪಿಸಿ, ಬಳಿಕ ಗಂಗಾವತಿಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದರು. ಮದುವೆಯಾದ ನಂತರ ಯುವಕನ ಮನೆಯಲ್ಲಿ ಜಾತಿ ಸಂಬಂಧ ಯುವತಿಗೆ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ.

- Advertisement -


ಇನ್ನು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಪ್ಪಳ ಜಿಲ್ಲಾ ವರಿಷ್ಠಾಧಿಕಾರಿ ರಾಮ್ ಎಲ್ ಅರಸಿದ್ದಿ, 13 ಮಂದಿಯ ಮೇಲೆ ಪ್ರಕರಣ ದಾಖಲಾಗಿದ್ದು, ಈವರೆಗೆ ಒಟ್ಟು 7 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೆ ದಿನ ಮೃತ ಯುವತಿಯ ಗಂಡ ಹನುಮಯ್ಯ ಹಾಗೂ ಅವನ ತಂದೆ ಕಾಳಿಂಗಪ್ಪನನ್ನು ಅರೆಸ್ಟ್ ಮಾಡಲಾಗಿದೆ. ಸೋಮವಾರ ಹನುಮಯ್ಯನ ತಾಯಿ ಸೇರಿದಂತೆ ನಾಲ್ಕು ಜನರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದರು.



Join Whatsapp
Exit mobile version