ಪಡಿತರ ಅಂಗಡಿಯಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ ಆರೋಪ: ನೊಂದ ಮಹಿಳೆ ಮನೆಗೆ ಸುಧಾಕರ್ ಭೇಟಿ

Prasthutha|

ಚಿಕ್ಕಬಳ್ಳಾಪುರ: ನ್ಯಾಯಬೆಲೆ ಅಂಗಡಿಯಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ನೊಂದ ಮಹಿಳೆ ಮನೆಗೆ ಸಚಿವ ಡಾ.ಕೆ. ಸುಧಾಕರ್ ಭೇಟಿ ನೀಡಿ ಸಮಾಧಾನ ಹೇಳಿದ್ದಾರೆ.

- Advertisement -


ಅಲ್ಲದೆ ಈ ಘಟನೆಯ ಬಗ್ಗೆ ಕಾನೂನು ಕ್ರಮಕ್ಕೆ ಅಧಿಕಾರಿಗಳಿಗೆ ಸುಧಾಕರ್ ಸೂಚನೆ ನೀಡಿದ್ದಾರೆ.


ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಕಾಟೇನಹಳ್ಳಿಯಲ್ಲಿ ನ್ಯಾಯಬೆಲೆ ಅಂಗಡಿ ಮಾಲಕಿ ಪದ್ಮಾವತಿ ಎಂಬವರು ಪಡಿತರ ಪಡೆಯಲು ಹೋಗಿದ್ದ ಮಹಿಳೆ ಮೇಲೆ ದೌರ್ಜನ್ಯ ಹಾಗೂ ಜಾತಿ ನಿಂದನೆ ಮಾಡಿ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

Join Whatsapp