ದಲಿತ ಯುವಕನ ಮೇಲೆ ಹಲ್ಲೆ: ಮಹಿಳಾ ಉದ್ಯಮಿ ಸೇರಿ 6 ಮಂದಿಯ ವಿರುದ್ಧ FIR

Prasthutha|

ಗಾಂಧಿನಗರ: ದಲಿತ ಯುವಕನ ಮೇಲೆ ಹಲ್ಲೆ ಹಾಗೂ ಆತನ ಬಾಯಿಗೆ ಚಪ್ಪಲಿ ತುರುಕಿದ ಆರೋಪದ ಮೇಲೆ ಮಹಿಳಾ ಉದ್ಯಮಿ ಜೊತೆ 6 ಮಂದಿಯ ವಿರುದ್ಧ ಗುಜರಾತ್ ನ ಮೊರ್ಬಿ ನಗರದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -


ಕೃತ್ಯ ಎಸಗಿದ ಮಹಿಳಾ ಉದ್ಯಮಿಯನ್ನು ವಿಭೂತಿ ಪಟೇಲ್ ಅಕಾ ರಾಣಿಬಾ ಎಂದು ಗುರುತಿಸಲಾಗಿದೆ.


ಈ ಸಂಬಂಧ ಸಂತ್ರಸ್ತ ನಿಲೇಶ್ ದಲ್ಸಾನಿಯಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

- Advertisement -


ಈ ದೂರಿನ ಆಧಾರದ ಮೇಲೆ ಮೊರ್ಬಿ ನಗರದ ಪೊಲೀಸರು ಇಂದು ಮಹಿಳೆ ವಿಭೂತಿ ಪಟೇಲ್ ಅಕಾ ರಾಣಿಬಾ ಮತ್ತು ಆಕೆಯ ಸಹೋದರ ಓಂ ಪಟೇಲ್ ಮತ್ತು ಮ್ಯಾನೇಜರ್ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಎಸ್ಸಿ/ಎಸ್ಟಿ ಸೆಲ್) ಪ್ರತಿಪಾಲ್ ಸಿನ್ಹ್ ಝಾಲಾ ಹೇಳಿದರು.

Join Whatsapp