ದರ್ಶನ್ ಆ್ಯಂಡ್ ಗ್ಯಾಂಗ್’​ಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ

Prasthutha|

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗ್‌ನ ನ್ಯಾಯಾಂಗ ಬಂಧ ಅವಧಿಯನ್ನು ಕೋರ್ಟ್‌ ಆಗಸ್ಟ್‌ 14 ರವರೆಗೆ ವಿಸ್ತರಿಸಿದೆ.

- Advertisement -

ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ ಆರೋಪಿಗಳು, ತುಮಕೂರು ಜೈಲಿನಿಂದ 4 ಆರೋಪಿಗಳನ್ನ ಹಾಜರು ಪಡಿಸಲಾಗಿತ್ತು.

ದರ್ಶನ್, ಪವಿತ್ರಾಗೌಡ, ಪವನ್, ಪ್ರದೂಷ್, ವಿನಯ್, ದೀಪಕ್ ಸೇರಿ 17 ಮಂದಿ ಅರೆಸ್ಟ್ ಆಗಿದ್ದು ಪುನಃ ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವಂತೆ ಎಸ್‌ಐಟಿ ನ್ಯಾಯಾಧೀಶರ ಮುಂದೆ ರಿಮ್ಯಾಂಡ್‌ ಕಾಪಿಯನ್ನು ಸಲ್ಲಿಸಿ ಮನವಿ ಮಾಡಿತ್ತು.



Join Whatsapp