ಬೆದರಿಕೆ ಆರೋಪ: ನಟ‌ ದರ್ಶನ್ ವಿರುದ್ಧ ದೂರು ದಾಖಲು

Prasthutha|


ಬೆಂಗಳೂರು: ನಟ ದರ್ಶನ್ ತಮಗೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ನಿರ್ಮಾಪಕ ಭರತ್ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

- Advertisement -

ನಟ ದರ್ಶನ್ ಸಂಬಂಧಿಯಾಗಿರುವ, ಧ್ರುವನ್​ ಗೆ ಸಿನಿಮಾ ಮಾಡಬೇಕು ಎಂದು ನಿರ್ಮಾಪಕ ಭರತ್, ‘ಭಗವಾನ್ ಶ್ರೀಕೃಷ್ಣ ಪರಮಾತ್ಮ’ ಹೆಸರಿನ ಸಿನಿಮಾವನ್ನು ಎರಡು ವರ್ಷದ ಹಿಂದೆ ಮುಹೂರ್ತ ನೆರವೇರಿಸಿ, ಶೂಟಿಂಗ್ ಶುರು ಮಾಡಿದ್ದರು. ಆದರೆ ಹಣಕಾಸಿನ ತೊಂದರೆಯಿಂದ ಆ ಸಿನಿಮಾ ಚಿತ್ರೀಕರಣ ನಿಂತು ಹೋಗಿತ್ತು. ಆಗ ನಿರ್ಮಾಪಕ ಭರತ್ ಹಣಕಾಸಿನ ಸಮಸ್ಯೆ ಆಗಿದೆ. ಅದಕ್ಕೆ ಚಿತ್ರೀಕರಣ ತಡವಾಗಿದೆ ಎಂದು ನಟ ಧ್ರುವನ್ ಬಳಿ ಹೇಳಿದ್ದರು. ಆಗ ಧ್ರುವನ್ ಅವರು ದರ್ಶನ್ ಅವರಿಂದ ನಿರ್ಮಾಪಕರಿಗೆ ಕರೆ ಮಾಡಿಸಿದ್ದರು. ಆ ಸಮಯದಲ್ಲಿ ದರ್ಶನ್, ನಿರ್ಮಾಪಕರಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Join Whatsapp