ಮುಡಾ ಡೈವರ್ಟ್ ಮಾಡಲು ದರ್ಶನ್ ಕೇಸ್ ಮುನ್ನೆಲೆ: ಜೋಶಿ ಆರೋಪಕ್ಕೆ ಡಿಕೆಶಿ ಕಿಡಿ

Prasthutha|

ಬೆಂಗಳೂರು: ಮುಡಾ ಡೈವರ್ಟ್ ಮಾಡಲು ದರ್ಶನ್ ಕೇಸ್ ಮುನ್ನೆಲೆ ಎಂಬ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ಸದ್ಯ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದೆ.

- Advertisement -


ಈ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದು, ದರ್ಶನ್ ವಿಚಾರ ಹಾಗೂ ಮುಡಾ ಆರೋಪದ ವಿಚಾರ ಬಿಡಿ. ಈಗ ಮಹದಾಯಿ ವಿಚಾರದಲ್ಲಿ ಏನು ತೊಂದರೆಯಾಗಿದೆ. ಮಹದಾಯಿ ಯೋಜನೆಗೆ ಅನುಮತಿ ಕೊಡಿಸ್ರಪ್ಪ ಎಂದಿದ್ದಾರೆ.


ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹದಾಯಿ ಯೋಜನೆ ಜಾರಿ ಮಾಡಲು ದುಡ್ಡು ಕೊಡಿಸ್ರಪ್ಪ. ಗಣೇಶ ಚತುರ್ಥಿ ಹಬ್ಬದ ದಿನವೇ ವಿಘ್ನ ನಿವಾರಣೆ ಆಗಲಿ. ಇಲ್ಲಿಂದಲೇ ದೀರ್ಘದಂಡ ನಮಸ್ಕಾರ ಹಾಕುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

- Advertisement -


ಪ್ರಹ್ಲಾದ್ ಜೋಶಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ
ವಿಷಯ ಡೈವರ್ಟ್ ಮಾಡೋದಿದ್ರೆ ಅವರ ನಾಯಕರ ಸಿಡಿ ಇತ್ತಲ್ಲ? ಇಂಜೆಕ್ಷನ್ ಆರ್ಡರ್ ತೆಗೆದುಕೊಂಡಿದ್ದಾರಲ್ಲಾ, ಯಾರು ಮಾಡಿಸಿದ್ದು? ಜೋಶಿ ರಾಜ್ಯದ ವಿಚಾರವಾಗಿ ಮಾತನಾಡಿದ್ದನ್ನು ನಾನು ನೋಡಿಲ್ಲ. ಮಹದಾಯಿ ವಿಚಾರದಲ್ಲಿ ನಮಗೆ ಇನ್ನೂ ಅನುಮತಿಯೇ ಸಿಕ್ಕಿಲ್ಲ. ಆ ಬಗ್ಗೆ ಯಾವತ್ತಾದ್ರೂ ಕೇಂದ್ರ ಸಚಿವ ಜೋಶಿ ಮಾತನಾಡುತ್ತಾರಾ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.



Join Whatsapp
Exit mobile version