ಪೊಲೀಸ್ ಠಾಣೆಗೆ ಹಾಜರಾದ ದರ್ಶನ್ ಪತ್ನಿ ವಿಜಯಲಕ್ಷ್ಮಿ

Prasthutha|

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇಂದು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

- Advertisement -

ಇದೇ ಠಾಣೆಯಲ್ಲಿ ಅವರ ಪತಿ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದು, ಇದೇ ಮೊದಲ ಬಾರಿಗೆ ವಿಜಯಲಕ್ಷ್ಮಿ ಠಾಣೆಗೆ ಭೇಟಿ‌ ನೀಡಿದ್ದಾರೆ.

ಹೇಳಿಕೆ ದಾಖಲು ಮಾಡಲು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಇಂದು ಬೆಳಗ್ಗೆ ಪೊಲೀಸರು ನೋಟಿಸ್ ನೀಡಿದ್ದರು.

- Advertisement -

ಈ ಹಿನ್ನೆಲೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ವಿಜಯಲಕ್ಷ್ಮಿ ಹಾಜರಾಗಿದ್ದರು. ಮನೆಯಲ್ಲಿ ದರ್ಶನ್ ಶೂ ಸಿಕ್ಕ ಬಗ್ಗೆ ವಿಜಯಲಕ್ಷ್ಮಿ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.



Join Whatsapp