Home ಟಾಪ್ ಸುದ್ದಿಗಳು ಪೊಲೀಸ್ ಠಾಣೆಗೆ ಹಾಜರಾದ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಪೊಲೀಸ್ ಠಾಣೆಗೆ ಹಾಜರಾದ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇಂದು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಇದೇ ಠಾಣೆಯಲ್ಲಿ ಅವರ ಪತಿ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದು, ಇದೇ ಮೊದಲ ಬಾರಿಗೆ ವಿಜಯಲಕ್ಷ್ಮಿ ಠಾಣೆಗೆ ಭೇಟಿ‌ ನೀಡಿದ್ದಾರೆ.

ಹೇಳಿಕೆ ದಾಖಲು ಮಾಡಲು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಇಂದು ಬೆಳಗ್ಗೆ ಪೊಲೀಸರು ನೋಟಿಸ್ ನೀಡಿದ್ದರು.

ಈ ಹಿನ್ನೆಲೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ವಿಜಯಲಕ್ಷ್ಮಿ ಹಾಜರಾಗಿದ್ದರು. ಮನೆಯಲ್ಲಿ ದರ್ಶನ್ ಶೂ ಸಿಕ್ಕ ಬಗ್ಗೆ ವಿಜಯಲಕ್ಷ್ಮಿ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp
Exit mobile version