ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್ಡೌನ್: ಸಿಎಂ ಸಭೆಯಲ್ಲಿ ಡಿಸಿ ಇಂಗಿತ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ವಾರ (ಜೂನ್. 20ರ ವರೆಗೆ) ಲಾಕ್ಡೌನ್ ಮುಂದುವರೆಸಲು ಅವಕಾಶ ನೀಡುವಂತೆ ಸಿಎಂ ಜೊತೆಗಿನ ವರ್ಚುವಲ್ ಸಭೆಯಲ್ಲಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಮನವಿ ಮಾಡಿದರು. ಜಿಲ್ಲೆಯಲ್ಲಿ ಇನ್ನೂ ಶೇಕಡಾ 15ರಷ್ಟು ಪಾಸಿವಿಟಿ ದರ ಇರುವುದರಿಂದ ಇನ್ನಷ್ಟು ಬಿಗಿ ಕ್ರಮದ ಬಗ್ಗೆಯೂ ಚರ್ಚಿಸಿದರು.

- Advertisement -

ಅಲ್ಲದೇ, ತಾಲೂಕು-ತಾಲೂಕುಗಳ ನಡುವಿನ ಓಡಾಟಕ್ಕೂ ನಿರ್ಬಂಧ ವಿಧಿಸುವ ಬಗ್ಗೆಯೂ ಅಭಿಪ್ರಾಯ ಮಂಡಿಸಿದ ಜಿಲ್ಲಾಧಿಕಾರಿಗಳು, ಮಂಗಳೂರು, ಬಂಟ್ವಾಳ ತಾಲೂಕು ಹೊರತು ಪಡಿಸಿದರೆ ಉಳಿದಂತೆ ಸುಳ್ಯ, ಬೆಳ್ತಂಗಡಿ, ಪುತ್ತೂರು ತಾಲೂಕುಗಳಲ್ಲಿ ಕೊರೊನಾ ಪಾಸಿಟಿವ್ ಹೆಚ್ಚಾಗಿದೆ. ಆದ್ದರಿಂದ ವಾಹನ ಸಂಚಾರಕ್ಕೂ ನಿರ್ಬಂಧ ವಿಧಿಸುವ ಬಗ್ಗೆ ತಿಳಿಸಿದ್ದಾರೆ.  

ಇನ್ನು ಕಂಟೈನ್ಮೆಂಟ್ ಝೋನ್ ನಲ್ಲಿ ಸಂಪೂರ್ಣ ಲಾಕ್ ಡೌನ್ ಬಗ್ಗೆಯೂ ಚರ್ಚಿಸುವುದಾಗಿ ತಿಳಿಸಿರುವ ಜಿಲ್ಲಾಡಳಿತ, ಕೆಲವೊಂದು ವಿಚಾರಗಳಿಗೆ ಸಡಿಲಿಕೆ ಮಾಡಿ ದ.ಕ ಜಿಲ್ಲೆ ಲಾಕ್ ಡೌನ್ ಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಸಿಎಂ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಡಿಸಿ ರಾಜೇಂದ್ರ ತಿಳಿಸಿದ್ದಾರೆ.

- Advertisement -

ಈ ನಿಟ್ಟಿನಲ್ಲಿ ನಾಳೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಸೇರಿ ಲಾಕ್ ಡೌನ್ ರೂಪುರೇಷೆ ಮಾಡುವುದಾಗಿ ಜಿಲ್ಲಾಡಳಿತ ತಿಳಿಸಿದೆ.

Join Whatsapp