ಭಾರತ್ ಬಂದ್ ವೇಳೆ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಮೇಲೆ ಹರಿದ ಕಾರು: ಕಾಲಿಗೆ ಗಾಯ

Prasthutha|

ಬೆಂಗಳೂರು: ಇಂದು ಕೇಂದ್ರ ಸರ್ಕಾರದ ರೈತವಿರೋಧಿ ನೀತಿ, ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಭಾರತ್ ಬಂದ್ ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನೆಯ ವೇಳೆ IPS ಅಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಅವರ ಕಾಲಿನ ಮೇಲೆ ಕಾರೊಂದು ಹರಿದಿದೆ. ಘಟನೆಯಲ್ಲಿ ಡಿಸಿಪಿ ಮೀನಾ ಅವರ ಕಾಲಿಗೆ ಗಾಯವಾಗಿದೆ.

- Advertisement -

ಬೆಂಗಳೂರಿನ ಗೋರಗುಂಟೆ ಪಾಳ್ಯದ ಬಳಿಯಲ್ಲಿ ಪ್ರತಿಭಟನಾಕಾರರನ್ನು ತಡೆಯುವ ಸಲುವಾಗಿ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಕೂಡ ಬಂದೋಬಸ್ತ್ ನಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಕಾರೊಂದು ಅವರ ಕಾಲಿನ ಮೇಲೆ ಹರಿದಿರೋದಾಗಿ ತಿಳಿದು ಬಂದಿದೆ.

ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರ ಕಾಲಿನ ಮೇಲೆ ಕಾರು ಹರಿದ ಪರಿಣಾಮ ಅವರ ಕಾಲಿಗೆ ಅಲ್ಪ ಪ್ರಮಾಣದ ಗಾಯವಾಗಿರುವುದು ತಿಳಿದು ಬಂದಿದೆ. ಈ ಘಟನೆಯಿಂದಾಗಿ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Join Whatsapp