SDPI ಕೇರಳ ರಾಜ್ಯ ಸಮಿತಿ ಸದಸ್ಯನ ಮೇಲೆ ಮಾರಣಾಂತಿಕ ದಾಳಿ

Prasthutha|

ತಿರುವನಂತಪುರಂ: sdpi ಕೇರಳ ರಾಜ್ಯ ಸಮಿತಿ ಸದಸ್ಯರೊಬ್ಬರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮಾರಣಾಂತಿಕ ದಾಳಿ ನಡೆಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಎಸ್ಡಿಪಿಐ ಕೇರಳ ರಾಜ್ಯ ಸಮಿತಿ ಸದಸ್ಯ ಕೆ.ಎಸ್ ಶಾನ್ ದಾಳಿಗೊಳಗಾದವರು. ಅವರು ಇಂದು ರಾತ್ರಿ ಮಣ್ಣಂಚೇರಿ ಬಳಿ ಬೈಕ್ ನಲ್ಲಿ ಬರುತ್ತಿದ್ದಾಗ ಈ ದಾಳಿ ನಡೆದಿದೆ.
ರಾತ್ರಿ 8.30 ರ ಸುಮಾರಿಗೆ ಶಾನ್ ಅವರು ತನ್ನ ಬೈಕಿನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಬೈಕ್ ಗೆ ವಾಹನ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದಾಗ ಆರ್ ಎಸ್ ಎಸ್ ಕಾರ್ಯಕರ್ತರು ಅವರ ಮೇಲೆ ಏಕಾಏಕಿ ಮಾರಕಾಯುಧ ದಿಂದ ದಾಳಿ ನಡೆಸಿದ್ದಾರೆ. ಪರಿಣಾಮ ಅವರ ತಲೆ ಕೈಕಾಲು ಸೇರಿದಂತೆ ದೇಹದ ಹಲವೆಡೆ ಗಂಭೀರ ಗಾಯಗಳಾಗಿವೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರಿಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಕೇರಳ sdpi ಕಾರ್ಯಕರ್ತರು ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದರು.

Join Whatsapp