ಕಲುಷಿತ ನೀರು ಸೇವಿಸಿ ಮೃತಪಟ್ಟ ಪ್ರಕರಣ: ವಿಶೇಷ ತಂಡ ರಚಿಸಿದ ಸರ್ಕಾರ

Prasthutha|

ಬೆಂಗಳೂರು: ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆ ಪ್ರಕರಣಗಳ ತನಿಖೆ ನಡೆಸಲು ಮೂವರ ಅಧಿಕಾರಿಗಳ ತಂಡ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಕೊಪ್ಪಳದ ಬಸರಿಹಾಳ, ಕುಷ್ಠಗಿಯ ಬಿಜಕಲ್ ಗ್ರಾಮದ ವಾಂತಿ ಭೇದಿ ಪ್ರಕರಣ ಮತ್ತು ದೇವದುರ್ಗದ ರೇಕಲಮಡಿಯಲ್ಲಿ ಕಲುಷಿತ ನೀರು ಸೇವಿಸಿ ಮಗು ಸಾವನ್ನಪ್ಪಿತ್ತು.

ಪ್ರಕರಣದ ತನಿಖೆಗೆ ಐಎಎಸ್​​ ಅಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆಯುಕ್ತರು ಪಂಚಾಯತ್​​ ರಾಜ್ ಇಲಾಖೆ ಆಯುಕ್ತಾಲಯ, ಚಂದ್ರಹಾಸ್ ಅಧೀಕ್ಷಕ ಅಭಿಯಂತರರು, ಬಿ.ಆರ್‌. ವೆಂಕಟೇಶ್ ರಾಜತಾಂತ್ರಿಕ ಸಮಾಲೋಚಕರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇವರನ್ನು ನೇಮಿಸಲಾಗಿದೆ.

- Advertisement -

3 ಅಧಿಕಾರಗಳ ತಂಡ ಕೂಲಂಕುಷವಾಗಿ ತನಿಖೆ ನಡೆಸಿ ಇದೇ ತಿಂಗಳು 20ರೊಳಗೆ ವರದಿ ನೀಡುವಂತೆ ಸೂಚಿಸಿದೆ.

Join Whatsapp