ಸಾವಿನ ಹೆದ್ದಾರಿಯಾಗುತ್ತಿರುವ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ : ಅಪಘಾತದಲ್ಲಿ ಜೀವ ಕಳೆದುಕೊಂಡವರೆಷ್ಟು?

Prasthutha|

ರಾಮನಗರ: ದುಬಾರಿ ಟೋಲ್‌ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿರುವ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ಈಗ ಸಾವಿನ ಹೆದ್ದಾರಿಯಾಗುತ್ತಿದೆ.

- Advertisement -

ಬೆಂಗಳೂರು-ಮೈಸೂರು ನಗರಗಳನ್ನು ಬೆಸೆಯುವ ಈ ಹೆದ್ದಾರಿಯಲ್ಲಿ ಜನವರಿಯಿಂದ ಇಲ್ಲಿಯವರೆಗೂ 105 ಜನ ಪ್ರಾಣ ಕಳೆದುಕೊಂಡಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ 50, ಮಂಡ್ಯ ಜಿಲ್ಲೆಯಲ್ಲಿ 55 ಜನ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆಯಲ್ಲಿಯೇ 243 ಅಪಘಾತಗಳು ಸಂಭವಿಸಿದ್ದು 190 ಜನರಿಗೆ ಗಾಯಗಳಾಗಿವೆ. ಸದಾ ಒಂದಿಲ್ಲೊಂದು ವಿವಾದದಿಂದ ಖ್ಯಾತಿಗಳಿಸಿರುವ ನೂತನ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಅಪಘಾತ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.

- Advertisement -

ನಿನ್ನೆ(ಜೂನ್ 17) ಇದೇ ವಿಚಾರವನ್ನು ದಿಶಾ ಸಭೆಯಲ್ಲಿ ಸಂಸದ ಡಿಕೆ ಸುರೇಶ್ ಪ್ರಸ್ತಾಪ ಮಾಡಿದ್ದರು. ಸಭೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಪಿಡಿಗೆ ತರಾಟೆ ತೆಗೆದುಕೊಂಡು ಎಚ್ಚರಿಕೆ ನೀಡಿದ್ದರು. ಹೆದ್ದಾರಿ‌ ವೈಜ್ಞಾನಿಕವಾಗಿ ಇದೆಯಾ ಅಥವಾ ಇಲ್ಲವಾ ಹೆದ್ದಾರಿಯಲ್ಲಿ ಬ್ಲಾಕ್ ಸ್ಫಾಟ್ ಗಳು ಇವೆ. ಕೇಂದ್ರ ಸರ್ಕಾರ ಮುಚ್ಚಿ ಹಾಕಿಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಗರಂ ಆಗಿದ್ದರು. ಆಗ ಎನ್​ಹೆಚ್​ಎಐ ಅಧಿಕಾರಿ ಪೊಲೀಸರ ಜೊತೆ ಗೂಡಿ ಸಮಸ್ಯೆ ಬಗೆಹರಿಸುವ ಭರವಸೆ‌ ನೀಡಿದರು.

ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಮಾ.13 ರಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದರು. ಗಂಟೆಗೆ 100 ರಿಂದ 120 ಕಿಲೋ ಮೀಟರ್ ವೇಗದಲ್ಲಿ ವಾಹನಗಳು ಚಲಿಸುವಂತೆ ಎಕ್ಸ್‌ಪ್ರೆಸ್‌ವೇ ವಿನ್ಯಾಸಗೊಳಿಸಲಾಗಿದ್ದರೂ ಅಪಘಾತ ತಡೆಗೆ ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ಸರಿಯಾಗಿ ಅಳವಡಿಸದೇ ಇರುವುದು ಅಪಘಾತ, ಸಾವು-ನೋವುಗಳಿಗೆ ಕಾರಣವಾಗಿದೆ.

Join Whatsapp