Home ಟಾಪ್ ಸುದ್ದಿಗಳು ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಶೃಂಗೇರಿ: ಫಸಲು ನಾಶವಾಗಿ, ಸಾಲಬಾಧೆ ತಾಳಲಾರದೆ ರೈತರೊಬ್ಬರು ಅತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪದಲ್ಲಿ ನಡೆದಿದೆ.


ಕೊಪ್ಪ ತಾಲೂಕು ಅಗಳಗಂಡಿ ಗ್ರಾಮದ ಕಕ್ಕದ್ದೆ ರವೀಂದ್ರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ. ಜಯಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ 1.5 ಲಕ್ಷ ಹಾಗೂ ವ್ಯಕ್ತಿಯೊಬ್ಬರಿಂದ ಸಾಲ ಪಡೆದಿದ್ದರು.


ಸಾಲ ಬಾಧೆ ತಾಳಲಾರದೆ 2 ದಿನಗಳ ಹಿಂದೆ ರವೀಂದ್ರ ವಿಷ ಸೇವಿಸಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ರೈತನಿಗೆ ಇಬ್ಬರು ಮಕ್ಕಳು ಇದ್ದಾರೆ.


ಮೂರು ಬಾರಿ ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಔಷಧಿ ಸಿಂಪಡಿಸಿದ್ದು, ಆದರೆ ರೋಗ ನಿಯಂತ್ರಣಕ್ಕೆ ಬಂದಿರಲಿಲ್ಲ. ರೋಗದಿಂದ ಅಡಿಕೆ ಮರಗಳು ಧರೆಗುರುಳುತ್ತಿವೆ, ತೀವ್ರವಾಗಿ ಹಬ್ಬುತ್ತಿರುವ ಎಲೆ ಚುಕ್ಕಿ ರೋಗಕ್ಕೆ ಬೇಸತ್ತು ರೈತ ರವೀಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Join Whatsapp
Exit mobile version