ಗುರುವಾರದ ಕರ್ನಾಟಕ ಬಂದ್ ಗೆ ಪಾಪ್ಯುಲರ್ ಫ್ರಂಟ್ ಬೆಂಬಲ ಘೋಷಣೆ

Prasthutha|

ಬೆಂಗಳೂರು: ಹಿಜಾಬ್ ವಿರುದ್ದವಾಗಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್ ಕರೆ ನೀಡಿರುವ ನಾಳೆಯ (ಮಾರ್ಚ್ 17) ಕರ್ನಾಟಕ ಬಂದ್ ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಸೂಚಿಸಿದೆ.

- Advertisement -

ಈ ಬಗ್ಗೆ ಹೇಳಿಕೆ ನೀಡಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಯಾಸಿರ್ ಹಸನ್, ಹಿಜಾಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪು ಸ್ವೀಕಾರಾರ್ಹವಲ್ಲ, ಇದು ಅನ್ಯಾಯದ ತೀರ್ಪಾಗಿದೆ. ಈ ತೀರ್ಪನ್ನು ಇಡೀ ನಾಗರಿಕ ಸಮಾಜ ಹಾಗೂ ಮುಸ್ಲಿಮ್ ಸಮುದಾಯ ವಿರೋಧಿಸಿದೆ. ಮುಸ್ಲಿಮ್ ಸಮುದಾಯದ ಅತ್ಯುನ್ನತ ನಾಯಕರಾದ ಅಮೀರೆ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ರಶಾದಿ ನೇತೃತ್ವದಲ್ಲಿ ರಾಜ್ಯಮಟ್ಟದ ಮುಸ್ಲಿಮ್ ನಾಯಕರು ಸಭೆ ನಡೆಸಿ ತೀರ್ಪಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲು ಪ್ರತಿಭಟನಾರ್ಥವಾಗಿ ಮಾರ್ಚ್ 17ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ಈ ಬಂದ್ ಕರೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಸೂಚಿಸುತ್ತದೆ. ನಾಳಿನ ಶಾಂತಿಯುತ ಬಂದ್ ಗೆ ಎಲ್ಲರೂ ಸ್ವಯಂಪ್ರೇರಿತರಾಗಿ ಬೆಂಬಲ ಸೂಚಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

Join Whatsapp