ಶಿಕ್ಷಕರನ್ನು ಕೊರೊನಾ ವಾರಿಯರ್ಸ್‌ ಎಂದು ಘೋಷಿಸಿ : ಮುಖ್ಯಮಂತ್ರಿಗೆ ಹೊರಟ್ಟಿ ಪತ್ರ

Prasthutha|

ಕೊರೊನಾ ಕಾರಣದಿಂದ ಶಿಕ್ಷಕರ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು, “ಶಿಕ್ಷಕರನ್ನು ಕೊರೊನಾ ವಾರಿಯರ್ಸ್‌ ಎಂದು ಘೋಷಿಸಬೇಕು” ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, “ಕಳೆದ ಕೆಲವು ವಾರಗಳಲ್ಲಿ ಉಪ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಹಲವು ಶಿಕ್ಷಕರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ.

- Advertisement -


“ಶಿಕ್ಷಕರನ್ನು ಜನಗಣತಿ ಸೇರಿದಂತೆ ಉಪ ಚುನಾವಣೆ ಕರ್ತವ್ಯ ಹಾಗೂ ಇತರ ಕಾರ್ಯಗಳಿಗೆ ನಿಯೋಜಿಸಲಾಗುತ್ತಿದೆ. ಆದರೆ, ಅವರ ಬಗ್ಗೆ ಸರ್ಕಾರ ಕಾಳಜಿ ತೋರಿಸುತ್ತಿಲ್ಲ. ಅವರಿಗೆ ಅಗತ್ಯವಿರುವ ಆರೋಗ್ಯ ಸೌಲಭ್ಯ ಹಾಗೂ ರಕ್ಷಣೆಯನ್ನು ಒದಗಿಸುವ ಆಸಕ್ತಿ ತೋರಿಸುತ್ತಿಲ್ಲ” ಎಂದಿದ್ದಾರೆ.
“ಎಲ್ಲಾ ಶಿಕ್ಷಕರನ್ನು ಕೊರೊನಾ ವಾರಿಯರ್ಸ್‌ಗಳು ಎಂದು ಘೋಷಿಸಬೇಕು. ಶಿಕ್ಷಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಸರ್ಕಾರ ಆದ್ಯತೆ ನೀಡಿ ಲಸಿಕೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

- Advertisement -

Join Whatsapp