Home ಟಾಪ್ ಸುದ್ದಿಗಳು ಮಾನನಷ್ಟ ಮೊಕದ್ದಮೆ: ದೆಹಲಿ ಸಚಿವೆ ಅತಿಶಿಗೆ ಸಮನ್ಸ್

ಮಾನನಷ್ಟ ಮೊಕದ್ದಮೆ: ದೆಹಲಿ ಸಚಿವೆ ಅತಿಶಿಗೆ ಸಮನ್ಸ್

ನವದೆಹಲಿ: ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ, ಸಚಿವೆ ಅತಿಶಿ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ.

ಜೂನ್ 29 ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯವು ಸಮನ್ಸ್ನಲ್ಲಿ ಉಲ್ಲೇಖಿಸಿದೆ. ಈಚೆಗೆ ಪ್ರವೀಣ್ ಶಂಕರ್ ಕಪೂರ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಸಚಿವೆ ಅತಿಶಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

Join Whatsapp
Exit mobile version