Home ಟಾಪ್ ಸುದ್ದಿಗಳು ಡಿಕೆ ಶಿವಕುಮಾರ್ ಗೆ ದುಬೈ ತೆರಳಲು ದೆಹಲಿ ಹೈಕೋರ್ಟ್ ಅನುಮತಿ

ಡಿಕೆ ಶಿವಕುಮಾರ್ ಗೆ ದುಬೈ ತೆರಳಲು ದೆಹಲಿ ಹೈಕೋರ್ಟ್ ಅನುಮತಿ

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ವಿಶೇಷ ಅತಿಥಿಯಾಗಿರುವ ಕಾರ್ಯಕ್ರಮವೊಂದಕ್ಕೆ ದುಬೈಗೆ ತೆರಳಲು ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಡಿಕೆ ಶಿವಕುಮಾರ್ ಆರೋಪಿಯಾಗಿದ್ದಾರೆ.

ಶಿವಕುಮಾರ್ ಪರ ವಕೀಲರು ನ್ಯಾಯಾಲಯದ ಮುಂದೆ ದುಬೈನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಶಿವಕುಮಾರ್ ಅವರ ಉಪಸ್ಥಿತಿ ಅಗತ್ಯವಿದೆ ಎಂದು ವಾದಿಸಿದರು. ವಾದವನ್ನು ಆಲಿಸಿದ ನ್ಯಾಯಮೂರ್ತಿ ಆಶಾ ಮೆನನ್ ಮಾರ್ಚ್ 31 ಮತ್ತು ಏಪ್ರಿಲ್ 6 ರ ನಡುವೆ ಒಂದು ವಾರ ವಿದೇಶಕ್ಕೆ ಹೋಗಲು ಅವಕಾಶ ಮಾಡಿಕೊಟ್ಟಿದ್ದು, ಆರೋಪಿ ಹಿಂದಿರುಗಿದ ನಂತರ ತನಿಖಾಧಿಕಾರಿಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದೆ.

Join Whatsapp
Exit mobile version