Home ಟಾಪ್ ಸುದ್ದಿಗಳು ‘ಆಮ್ಲಜನಕ ಪೂರೈಕೆಗೆ ಅಡ್ಡಿಪಡಿಸಿದರೆ ಗಲ್ಲು ಶಿಕ್ಷೆ’ : ದೆಹಲಿ ಹೈಕೋರ್ಟ್‌ ಎಚ್ಚರಿಕೆ

‘ಆಮ್ಲಜನಕ ಪೂರೈಕೆಗೆ ಅಡ್ಡಿಪಡಿಸಿದರೆ ಗಲ್ಲು ಶಿಕ್ಷೆ’ : ದೆಹಲಿ ಹೈಕೋರ್ಟ್‌ ಎಚ್ಚರಿಕೆ

 ದೇಶದಲ್ಲಿ ವ್ಯಾಪಕವಾಗಿ ಹರಡಿರುವ ಕೊರೋನ ರೋಗಿಗಳಿಗೆ ಆಮ್ಲಜನಕ ಪೂರೈಕೆಗೆ ಕೇಂದ್ರ, ರಾಜ್ಯ ಹಾಗೂ ಸ್ಥಳೀಯ ಆಡಳಿತದ ಯಾವುದೇ ಅಧಿಕಾರಿ ಅಡ್ಡಿಪಡಿಸಿದಲ್ಲಿ ಆ ವ್ಯಕ್ತಿಯನ್ನು ಗಲ್ಲಿಗೇರಿಸಲಾಗುವುದು” ಎಂದು ಶನಿವಾರ ದೆಹಲಿ ಹೈಕೋರ್ಟ್‌ ತಿಳಿಸಿದೆ.

ಕೊರೊನಾ ರೋಗಿಗಳಿಗೆ ಆಮ್ಲಜನಕದ ಕೊರತೆ ಉಂಟಾಗಿರುವ ಬಗ್ಗೆ ನ್ಯಾಯಾಲಯಕ್ಕೆ ಮಹಾರಾಜ ಅಗ್ರಸೇನ್‌ ಆಸ್ಪತ್ರೆ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿಗಳಾದ ವಿಪಿನ್‌ ಸಂಘಿ ಹಾಗೂ ರೇಖಾ ಪಲ್ಲಿ ಅವರ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿದ್ದು, “ಆಮ್ಲಜನಕ ಸರಬರಾಜಿಗೆ ಯಾರು ಅಡ್ಡಿಪಡಿಸುತ್ತಾರೆ ಎನ್ನುವುದನ್ನು ತಿಳಿಸಿ” ಎಂದು ನ್ಯಾಯಾಲಯ ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿದೆ.

“ಆಮ್ಲಜನಕ ಪೂರೈಕೆಗೆ ಅಡ್ಡಿಯುಂಟು ಮಾಡುವವರನ್ನು ಗಲ್ಲಿಗೇರಿಸುತ್ತೇವೆ. ನಾವು ಯಾರನ್ನೂ ಬಿಡುವುದಿಲ್ಲ” ಎಂದು ನ್ಯಾಯಾಲಯ ತಿಳಿಸಿದೆ.

ಸ್ಥಳೀಯ ಆಡಳಿತದ ಅಧಿಕಾರಿಗಳ ಬಗ್ಗೆ ಕೇಂದ್ರಕ್ಕೆ ತಿಳಿಸುವಂತೆ ನ್ಯಾಯಾಲಯ ದೆಹಲಿ ಸರ್ಕಾರಕ್ಕೆ ತಿಳಿಸಿದ್ದು, “ಅವರ ಬಗ್ಗೆ ಕೇಂದ್ರವೂ ಕ್ರಮ ಕೈಗೊಳ್ಳಬಹುದು” ಎಂದು ಈ ಸಂದರ್ಭದಲ್ಲಿ  ಹೇಳಿದೆ.

Join Whatsapp
Exit mobile version