ಜೂ.18ರಂದೇ ನೂಪುರ್ ಶರ್ಮಾ ವಿಚಾರಣೆ ನಡೆದಿತ್ತು: ಸುಪ್ರೀಂ ಕೋರ್ಟ್’ಗೆ ದೆಹಲಿ ಪೊಲೀಸರ ಪ್ರತಿಕ್ರಿಯೆ

Prasthutha|

ನವದೆಹಲಿ: ಪ್ರವಾದಿ ನಿಂದನೆಗೈದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಜೂನ್ 18ರಂದು ನೋಟಿಸ್ ನೀಡಿ ಅದೇದಿನ ವಿಚಾರಣೆಗೊಳಪಡಿಸಿದ್ದೆವು ಎಂದು ದೆಹಲಿ ಪೊಲೀಸರು ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ.

- Advertisement -


ಬೇರೆಯವರ ವಿರುದ್ಧ ಎಫ್ ಐಆರ್ ದಾಖಲಾದ ತಕ್ಷಣವೇ ಅವರನ್ನು ಬಂಧಿಸುತ್ತೀರಿ. ಆದರೆ ಇವರನ್ನು ಏಕೆ ಬಂಧಿಸಿಲ್ಲ. ಅವರ ವಿರುದ್ಧ ದಾಖಲಾದ ಎಫ್ ಐಆರ್ ನ ತನಿಖೆಯ ಪ್ರಗತಿ ಏನಾಯಿತು. ದೆಹಲಿ ಪೊಲೀಸರು ಏನು ಮಾಡಿದ್ದಾರೆ? ನಾವು ಆ ಬಗ್ಗೆಯೂ ಮಾತನಾಡಬೇಕೆ ಎಂದು ಪ್ರಶ್ನಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ದೆಹಲಿ ಪೊಲೀಸರು ಪ್ರತಿಕ್ರಿಯಿಸಿ ಜೂನ್ 18ರಂದು ನೋಟಿಸ್ ನೀಡಿ ಅದೇದಿನ ವಿಚಾರಣೆಗೊಳಪಡಿಸಿದ್ದೆವು ಎಂದು ಹೇಳಿದ್ದಾರೆ.


ಸುದ್ದಿವಾಹಿನಿಯೊಂದರ ಕಾರ್ಯಕ್ರಮದಲ್ಲಿ ಪ್ರವಾದಿ ಮಹಮ್ಮದರ ಕುರಿತು ನೂಪುರ್ ಶರ್ಮಾ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆ.ಬಿ.ಪಾರ್ದಿವಾಲಾ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿ, ನೂಪುರ್ ಶರ್ಮಾ ಮತ್ತು ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು.

Join Whatsapp