2020 ರ ದೆಹಲಿ ಗಲಭೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ ನ್ಯಾಯಾಲಯ

Prasthutha|

ನವದೆಹಲಿ: ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ದೆಹಲಿ ಪೊಲೀಸರು ತನ್ನ ವಿರುದ್ಧ ಹೊರಿಸಿದ ಎಲ್ಲಾ ಆರೋಪಗಳಿಂದ ಆರೋಪಿ ನೂರ್ ಮುಹಮ್ಮದ್ ಅಲಿಯಾಸ್ ನೂರಾ ಅವರನ್ನು ದೆಹಲಿ ನ್ಯಾಯಾಲಯ ಖುಲಾಸೆಗೊಳಿಸಿದೆ.

- Advertisement -

ಈ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ಈ ಆದೇಶ ಹೊರಡಿಸಿದ್ದು, ಇಲ್ಲಿ ಆರೋಪಿಗಳ ವಿರುದ್ಧ ಯಾವುದೇ ರೀತಿಯ ಬಹಿರಂಗ ಕೃತ್ಯದ ಬಗ್ಗೆ ಯಾವುದೇ ಪುರಾವೆಗಳಿಲ್ಲ, ಅಥವಾ ಗಲಭೆಕೋರ ಜನಸಮೂಹದಲ್ಲಿ ಆರೋಪಿಗಳನ್ನು ಗುರುತಿಸುವ ಬಗ್ಗೆ ನಾಲ್ಕು ಸಾಕ್ಷಿಗಳ ಸ್ಥಿರವಾದ ಪುರಾವೆಗಳಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಭಾರತೀಯ ದಂಡ ಸಂಹಿತೆ, 1860 ರ ಸೆಕ್ಷನ್ 147, 148, 427, 436 ಮತ್ತು 149 ರ ಅಡಿಯಲ್ಲಿ ನೂರಾ ಅವರನ್ನು ಎಲ್ಲಾ ಆರೋಪಗಳಿಂದ ನ್ಯಾಯಾಲಯ ಖುಲಾಸೆಗೊಳಿಸಿತು.

- Advertisement -

ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಅಂಗಡಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಆರೋಪಿ ನೂರ್ ಮುಹಮ್ಮದ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

Join Whatsapp