ಬೆಂಗಳೂರು | ಕಿಲ್ಲರ್ ಕಸದ ಲಾರಿಗೆ ಸ್ವಿಗ್ಗಿ ಡೆಲಿವರಿ ಬಾಯ್ ಬಲಿ

Prasthutha|

ಬೆಂಗಳೂರು: ಕಿಲ್ಲರ್ ಕಸದ ಲಾರಿಗೆ ಬೆಂಗಳೂರಿನಲ್ಲಿ ಯಾದಗಿರಿ ಮೂಲದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ದೇವಣ್ಣ (25) ಎಂಬಾತನೇ ಮೃತ ದುರ್ದೈವಿಯಾಗಿದ್ದು, ನಾಗವಾರ – ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.

- Advertisement -

ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದ ದೇವಣ್ಣ ನಾಗವಾರದಿಂದ ಹೆಗ್ಗಡೆ ನಗಾರ್ ಕಡೆಗೆ ಹೋಗುತ್ತಿರುವಾಗ ಹಿಂದಿನಿಂದ ಬಂದ ಬಿಬಿಎಂಪಿ ಕಸದ ಲಾರಿ ಆತನ ಮೇಲೆರಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ದೇವಣ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಎರಡು ತಿಂಗಳಲ್ಲಿ ಬಿಬಿಎಂಪಿ ಕಿಲ್ಲರ್ ಲಾರಿಗೆ ನಾಲ್ಕನೇ ಬಲಿ:

- Advertisement -

ಮಾರ್ಚ್ 21 ರಂದು ಹೆಬ್ಬಾಳದ ಬಳಿ ಅಕ್ಷಯ ಎಂಬ ವಿದ್ಯಾರ್ಥಿನಿಯನ್ನು ಕಸದ ಲಾರಿಯೊಂದು ಬಲಿ ಪಡೆದಿತ್ತು. ಅಂಡರ್ ಪಾಸ್ ನಲ್ಲಿ ನೀರು ನಿಂತಿದೆ ಎಂದು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಕಸದ ಲಾರಿ ಹರಿದು ಮೃತಪಟ್ಟಿದ್ದಳು. ಇದಕ್ಕೆ ಸಂಬಂಧಿಸಿದಂತೆ ಆರ್. ಟಿ. ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಮಾರ್ಚ್ 31 ರಂದು ಬಾಗಲೂರು ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ರಾಮಯ್ಯ ಎಂಬ ವಯೋವೃದ್ಧನ ಮೇಲೆ ಕಸದ ಲಾರಿ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿದ್ದನು. ಈ ಕುರಿತು ಚಿಕ್ಕಜಾಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಏಪ್ರಿಲ್ 18 ರಂದು ಪದ್ಮಿನಿ ಎಂಬ ಎಸ್ ಬಿ ಐ ಉದ್ಯೋಗಿಯ ಮೇಲೆ ನಾಯಂಡಹಳ್ಳಿ ಜಂಕ್ಷನ್ ಬಳಿ ಕಸದ ಲಾರಿ ಹರಿದು ಸಾವನ್ನಪ್ಪಿದ್ದರು. ಇದಕ್ಕೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Join Whatsapp