ಹೆರಿಗೆಗಾಗಿ ಲಂಚದ ಬೇಡಿಕೆ: ಇಬ್ಬರು ವೈದ್ಯರ ಅಮಾನತು

Prasthutha|

ಬಿಡದಿ: ಇಲ್ಲಿನ ಸಮುದಾಯ ಕೇಂದ್ರದಲ್ಲಿ ಬಾಣಂತಿವೊಬ್ಬರಿಗೆ ಹೆರಿಗೆ ಮಾಡಿಸಲು 6 ಸಾವಿರ ಲಂಚ ಕೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರಿಬ್ಬರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶ ನೀಡಿದೆ. ವೈದ್ಯರು ಲಂಚ ಕೇಳುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

- Advertisement -

ಪ್ರಸೂತಿ ತಜ್ಞೆಯರಾದ ಡಾ. ಶಶಿಕಲಾ ಮತ್ತು ಡಾ. ಐಶ್ವರ್ಯ ಅವರೇ ಕರ್ತವ್ಯದಿಂದ ಅಮಾನತುಗೊಂಡ ವೈದ್ಯರಾಗಿದ್ದಾರೆ.

ಸ್ಥಳೀಯ ನಿವಾಸಿ ಮಂಜುನಾಥ್ ಎಂಬವರ ಹೆಂಡತಿ ನಾಲ್ಕು ದಿವಸಗಳ ಮೊದಲು ಬಿಡದಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ಮಾಡಲಾಗಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಚ್ ಸಂದರ್ಭದಲ್ಲಿ 6 ಸಾವಿರ ಲಂಚದ ಬೇಡಿಕೆಯಿಟ್ಟಿದ್ದರು.

- Advertisement -

ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಆರೋಗ್ಯಾಧಿಕಾರಿ ಡಾ. ಕಾಂತರಾಜು ಮತ್ತು ತನಿಖಾಧಿಕಾರಿ ಡಾ. ಮಂಜುನಾಥ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಆಸ್ಪತ್ರೆಯ ವೈದ್ಯರ ಕೃತ್ಯ ಮೇಲ್ನೋಟಕ್ಕೆ ತನಿಖೆಯ ವೇಳೆ ಸಾಬೀತಾಗಿದ್ದು, ಇಬ್ಬರನ್ನೂ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಅಲ್ಲದೆ ಈ ಹಣ ಇನ್ನು ಯಾರಿಗೆಲ್ಲಾ ಹೋಗುತ್ತಿತ್ತು ಎಂಬುವುದರ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುವುದು ಎಂದು ಆರೋಗ್ಯಾಧಿಕಾರಿ ಡಾ. ಕಾಂತರಾಜು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Join Whatsapp