ದಟ್ಟ ಮಂಜು ಹಿನ್ನೆಲೆ: ಮರಕ್ಕೆ ಕಾರು ಡಿಕ್ಕಿ, ನಾಲ್ವರು ಮೃತ್ಯು

Prasthutha|

ನಬರಂಗಪುರ(ಒಡಿಶಾ): ದಟ್ಟ ಮಂಜಿನಿಂದ ಸರಿಯಾಗಿ ರಸ್ತೆ ಕಾಣದೇ ವೇಗವಾಗಿ ಹೋಗುತ್ತಿದ್ದ ಕಾರು ಮರಕ್ಕೆ  ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿರುವ ದುರ್ಘಟನೆ

- Advertisement -

ಜಿಲ್ಲೆಯ ದಾಬುಗಾಂವ್ ಪೊಲೀಸ್ ವ್ಯಾಪ್ತಿಯ ಸರಗುಡದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.

ಅಪಘಾತದಲ್ಲಿ ಎಂಡಿ ಸದ್ದಾಂ, ರಬಿನ್ ಹಿಲಾ ಮತ್ತು ಸಬನ್ ಹಿಲಾಲ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಎಂಡಿ ಅನ್ಸಾರ್ ಕೋರಾಪುಟ್’ನ ಸಹೀದ್ ಲಕ್ಷ್ಮಣ್ ನಾಯಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

- Advertisement -

ಈ ಅಪಘಾತದಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಮರ್’ಕೋಟೆಯಿಂದ ನಬರಂಗಪುರಕ್ಕೆ ಹಿಂದಿರುಗುತ್ತಿದ್ದ ವೇಳೆ ದಟ್ಟ ಮಂಜಿನಿಂದಾಗಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಸುದ್ದಿ ತಿಳಿದ ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಕಲೆ ಹಾಕಿದರು. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಅನುಸರಿಸಿದ್ದಾರೆ.

Join Whatsapp