ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟ: ಡೆಪ್ಯುಟಿ ಮ್ಯಾನೇಜರ್​ ಮೃತ್ಯು

Prasthutha|

ಮಂಡ್ಯ: ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟಗೊಂಡು ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪದಲ್ಲಿರುವ NSL ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ.

- Advertisement -

ಶಿವಮೊಗ್ಗ ಮೂಲದ ಶ್ರೀಧರ್(48) ಮೃತ ಡೆಪ್ಯುಟಿ ಮ್ಯಾನೇಜರ್. ವಿದ್ಯುತ್ ವಿಭಾಗದ ಕಂಟ್ರೋಲ್ ರೂಂನಲ್ಲಿ ಕೆಲಸ ಮಾಡುವಾಗ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸ್ಫೋಟದ ಬಳಿಕ ರಾಸಾಯನಿಕ ಸೋರಿಕೆಯಿಂದ ಶ್ರೀಧರ್​ ಅಸ್ವಸ್ಥಗೊಂಡಿದ್ದಾರೆ. ಇತರೆ ಸಿಬ್ಬಂದಿಗಳು ಗಮನಿಸಿ ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version