ಕರ್ತವ್ಯ ಲೋಪ ಹಿನ್ನೆಲೆ; 6 ಮಂದಿ ಪೊಲೀಸರ ಸಸ್ಪೆಂಡ್

Prasthutha|

ಹಾಸನ: ಶಿರಾಡಿಘಾಟ್ ರಸ್ತೆ ಚೆಕ್‌ಪೋಸ್ಟ್ ನಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪ ಹಿನ್ನೆಲೆ ಸಕಲೇಶಪುರ ಗ್ರಾಮಾಂತರ ಠಾಣೆಯ 6 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಎಸ್ಪಿ ಹರಿರಾಂ ಶಂಕರ್ ಆದೇಶ ಹೊರಡಿಸಿದ್ದಾರೆ.

- Advertisement -

ಶಿರಾಡಿ ಘಾಟ್ ರಸ್ತೆ ಬಂದ್ ಆಗಿದ್ದಾಗ ರಾತ್ರಿ ವೇಳೆ ನಿರ್ಬಂಧಿತ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಿ ಕರ್ತವ್ಯ ಲೋಪ ಎಸಗಿದ ಆರೋಪ ಹಿನ್ನೆಲೆ ಈ ಕ್ರಮ ಕೈಗೊಂಡಿದ್ದಾರೆ. ಸಕಲೇಶಪುರ ತಾಲೂಕಿನ ದೋಣಿಗಾಲ್ ಮತ್ತು ಮಾರನಹಳ್ಳಿ ಚೆಕ್ ಪೋಸ್ಟ್ ನಲ್ಲಿ ನಿಯೋಜನೆಗೊಂಡಿದ್ದ ಪೊಲೀಸರು, ಕರ್ತವ್ಯದ ವೇಳೆ ಲೋಪ ಎಸಗಿದ್ದ ಆರೋಪದಡಿ 6 ಮಂದಿ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಿದ್ದಾರೆ.

Join Whatsapp