ಬಡ ಮಹಿಳೆ ನಿರ್ಮಿಸುತ್ತಿದ್ದ ಮನೆ ಧ್ವಂಸ: ಪೊಲೀಸರಿಗೆ ದೂರು

Prasthutha|

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ 34 ನೆಕ್ಕಿಲಾಡಿಯ ಬಡ ಮಹಿಳೆಯೊಬ್ಬರು ನಿರ್ಮಿಸುತ್ತಿದ್ದ ಮನೆಯನ್ನು ಧ್ವಂಸಗೊಳಿಸಲಾಗಿದೆ.

- Advertisement -

ಕನ್ನಡಿಗಾರ್ ನಿವಾಸಿ ಬಾಲಚಂದ್ರ ಗೌಡ ಎಂಬವರು ಈ‌ಕೃತ್ಯವೆಸಗಿದ್ದಾರೆ ಎಂದು ಅನುಮಾನಿಸಲಾಗಿದೆ. ಮಮತಾ ಅವರು ಬಾಲಚಂದ್ರ ಗೌಡ ವಿರುದ್ಧ ಉಪ್ಪಿನಂಗಡಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

2024ರ ಏಪ್ರಿಲ್ 12ರಂದು ನಾವು ಮನೆ ಕಟ್ಟುತ್ತಿದ್ದ ಜಾಗದ ಸಮೀಪದ ಕನ್ನಡಿಗಾರ್ ನಿವಾಸಿ ಬಾಲಚಂದ್ರ ಗೌಡ, ‘ಇಲ್ಲಿ ನೀವು ಮನೆ ಕಟ್ಟಬಾರದು. ಇಲ್ಲಿ ನೀವು ವಾಸವಿರಬಾರದು ಎಂದು ಬೆದರಿಕೆ ಹಾಕಿ ಹೋಗಿದ್ದರು. ನನ್ನ ಗಂಡ ಕೆಲಸ ಕಳೆದುಕೊಂಡರೂ ಮಾನವೀಯ ನೆಲೆಯಲ್ಲಿ ನಗರ ಸಭೆಯ ವಸತಿ ಗೃಹದಲ್ಲಿ ನಮಗೆ ವಾಸಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಆ ಬಳಿಕ ನಗರ ಸಭೆಯು ಮನೆ ಬಿಡುವಂತೆ ನೋಟಿಸ್‌ ನೀಡಿ, ನಮ್ಮನ್ನು ವಸತಿಗೃಹದಿಂದ ಎಬ್ಬಿಸಿತ್ತು. ಕಟ್ಟುತ್ತಿದ್ದ ಮನೆಯೂ ಪೂರ್ಣಗೊಳ್ಳದಿರುವುದರಿಂದ, ಬೇರೆ ಎಲ್ಲಿಯೂ ನಮಗೆ ಮನೆಯೂ ಇಲ್ಲದ್ದರಿಂದ ಸಂಬಂಧಿಕರ ಮನೆಯಲ್ಲಿ ವಾಸವಿದ್ದೆವು ಎಂದು ಮಮತಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

- Advertisement -

ಈ ಬಾರಿ ಅದಕ್ಕೆ ಶೀಟ್ ಹಾಕಿ ಆ ಮನೆಯಲ್ಲಿ ವಾಸ್ತವ್ಯ ಮಾಡಬೇಕೆಂದು ಯೋಚನೆಯಲ್ಲಿದ್ದೆವು. ಆದರೆ, ಅಲ್ಲಿಗೆ ಬಂದು ನೋಡಿದಾಗ ಮನೆಯನ್ನು ಸಂಪೂರ್ಣವಾಗಿ ಕೆಡವಲಾಗಿತ್ತು. ಒಂದು ಕಡೆ ಕೆಲಸ ಕಳೆದುಕೊಂಡಿರುವ ಪತಿ, ಎಂಬಿಎ ಓದುತ್ತಿರುವ ಪುತ್ರ, ದ್ವಿತೀಯ ಪಿಯು ಓದುತ್ತಿರುವ ಪುತ್ರಿಯೊಂದಿಗೆ ನಾವೆಲ್ಲಾ ಈಗ ಬೀದಿಗೆ ಬೀಳುವಂತಾಗಿದೆ ಎಂದು ಮಮತಾ ದೂರಿನಲ್ಲಿ ತಿಳಿಸಿದ್ದಾರೆ.



Join Whatsapp