ಗಾಂಜಾ ಮಾರಾಟ ಮಾಡುತ್ತಿದ್ದ ಅರ್ಚಕನ ಬಂಧನ !

Prasthutha|

ಕಾರವಾರ: ಗಾಂಜಾ ಮಾರಾಟ ಮಾಡುತ್ತಿದ್ದ ಅರ್ಚಕರನ್ನು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕುಡಗುಂದ ದಲ್ಲಿ ನಡೆದಿದೆ.

- Advertisement -

ಇಲ್ಲಿನ ಸ್ಥಳೀಯ ದೇವಸ್ಥಾನದ ಅರ್ಚಕ ಚಂದ್ರಶೇಖರ ಭಟ್ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ.
ಇತನ ಮನೆಯ ಬಳಿ ಕೆಲವು ಕಾಲೇಜು ವಿದ್ಯಾರ್ಥಿಗಳು ಭೇಟಿ ನೀಡುವ ಮಾಹಿತಿ ಲಭಿಸಿದ್ದು. ಕೊನೆಗೆ ಖಚಿತ ಮಾಹಿತಿ ಪಡೆದು ಅಧಿಕಾರಿಗಳು ದಾಳಿ ಮಾಡಿದ್ದರು. ಅಧಿಕಾರಿಗಳ ದಾಳಿ ನಡೆಯುವ ದಿನವೂ ಮೂರ್ನಾಲ್ಕು ಕಾಲೇಜು ವಿದ್ಯಾರ್ಥಿಗಳು ಗಾಂಜಾ ಖರೀದಿಗೆ ಬಂದಿದ್ದರು ಎನ್ನಲಾಗಿದೆ.

ಅಧಿಕಾರಿಗಳು ಮನೆ ಶೋಧ ಮಾಡಿದ ಸಂದರ್ಭದಲ್ಲಿ ಅಡುಗೆ ಮನೆಯ ಗ್ಯಾಸ್ ಕಟ್ಟೆಯ ಕೆಳಗಡೆ ಗಾಂಜಾ ಬಚ್ಚಿಟ್ಟಿದ್ದು ಪತ್ತೆಯಾಗಿದೆ. 140 ಗ್ರಾಂ ಗಾಂಜಾ ಪ್ಯಾಕೇಟನ್ನು ಅಡುಗೆ ಮನೆಯ ಡಬ್ಬಾದಲ್ಲಿ ಪ್ಯಾಸ್ಟಿಕ್ ಚೀಲದಲ್ಲಿ ತುಂಬಿಡಲಾಗಿತ್ತು ಎಂದು ತಿಳಿದು ಬಂದಿದೆ.

Join Whatsapp