ದೇವೇಗೌಡರು ಕ್ಷುಲ್ಲಕ ರಾಜಕಾರಣಕ್ಕೆ ಹೆಸರುವಾಸಿ: ಡಿಕೆ ಸುರೇಶ್ ತಿರುಗೇಟು

Prasthutha|

ಆನೇಕಲ್: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಕ್ಷುಲ್ಲಕ ರಾಜಕಾರಣ ಮಾಡುವುದಕ್ಕೆ ಹೆಸರುವಾಸಿಯಾದವರು. ಅವರು ಹಿರಿಯರು, ಹಾಗಾಗಿ ಹೆಚ್ಚು ಮಾತನಾಡಲು ಹೋಗುವುದಿಲ್ಲ. ಅವರ ಆರೋಪಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಕೊಡುತ್ತೇವೆ ಎಂದು ಸಂಸದ ಡಿಕೆ ಸುರೇಶ್ ತಿರುಗೇಟು ನೀಡಿದರು.

- Advertisement -


ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಮಾತನಾಡಿದ ಅವರು, ನಾನು ಮತ್ತು ಡಿಕೆ ಶಿವಕುಮಾರ್ ಕಲ್ಲು ಹೊಡೆದರು ಎಂದು ಆರೋಪಿಸುತ್ತಾರಲ್ಲವೇ, ಅವರ ಕುಟುಂಬದಲ್ಲಿ ಯಾರು ಕಲ್ಲು ಹೊಡೆದಿದ್ದಾರೆ ತೋರಿಸುತ್ತೇನೆ. ಯಾರ ಜಮೀನನ್ನು ವಶಪಡಿಸಿಕೊಂಡಿದ್ದಾರೆ ಎಂಬುದನ್ನು ತೋರಿಸುತ್ತೇನೆ ಎಂದರು.

Join Whatsapp