ದೇವೇಗೌಡರು ವಿರೋಧ ಪಕ್ಷದ ನಾಯಕರಾಗಿದ್ದರು, ಅದು ಪುಟಗೋಸಿ ಹುದ್ದೆನಾ?: ಸಿದ್ದರಾಮಯ್ಯ ತಿರುಗೇಟು

Prasthutha|

ಕಲಬುರಗಿ: ಪುಟಗೋಸಿ ವಿಪಕ್ಷ ನಾಯಕ ಸ್ಥಾನಕ್ಕಾಗಿ ಮೈತ್ರಿ ಸರ್ಕಾರವನ್ನು ತೆಗೆದರು ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ದೇವೇಗೌಡರು ವಿಪಕ್ಷ ನಾಯಕನಾಗಿದ್ದರು ಹಾಗಾದರೆ ಅದುಕೂಡ ಪುಟಗೋಸಿನಾ? ಎಂದು ಪ್ರಶ್ನಿಸಿದ್ದಾರೆ.

- Advertisement -


ಕಲಬುರಗಿಯಲ್ಲಿ ಮಾತನಾಡಿದ ಅವರು, ರಾಜಕೀಯವಾಗಿ ನನ್ನ ಕಂಡರೆ ಕುಮಾರಸ್ವಾಮಿಗೆ ಭಯ. ಸಿಎಂ ಆಗಿದ್ದವರು ಜವಾಬ್ದಾರಿಯಿಂದ ಮಾತನಾಡಬೇಕು. ಸಾಂವಿಧಾನಿಕ ಹುದ್ದೆ ಬಗ್ಗೆ ಲಘುವಾಗಿ ಮಾತನಾಡಬಾರದು. ಎಚ್.ಡಿ.ಕುಮಾರಸ್ವಾಮಿ ವೈಯಕ್ತಿಕವಾಗಿ ಮಾತಾಡಬಾರದು ಅಂತ ಕಲಬುರಗಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Join Whatsapp