ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ ಡಿಜಿ & ಐಜಿಪಿ ಅಲೋಕ್ ಮೋಹನ್

Prasthutha|

ಬೆಂಗಳೂರು: ಪ್ರತಿ ದಿನ 1 ಠಾಣೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಸೂಚನೆ ನೀಡಿದ್ದಾರೆ.

- Advertisement -

ಕಮಿಷನರ್​, ಐಜಿಪಿ, ಡಿಐಜಿಪಿ, ಎಸ್​ಪಿಗಳಿಗೆ ಪ್ರತಿ ದಿನ ನಿಮ್ಮ ವ್ಯಾಪ್ತಿಯ ಒಂದು ಠಾಣೆಗೆ ದಿಢೀರ್ ಭೇಟಿ ನೀಡಬೇಕು ಎಂದಿದ್ದಾರೆ. ಆ ಮೂಲಕ ಪೊಲೀಸರ ಕಾರ್ಯವೈಖರಿ ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ. ಭದ್ರತೆಗೆ ನಿಯೋಜನೆಯಾಗಿದ್ದರೆ ಅಧಿಕಾರಿಗಳ ಸಂಪರ್ಕದಲ್ಲಿ ಇರಬೇಕು ಎಂದು ಹೇಳಿದ್ದಾರೆ.

ಹೆಡ್​ ಕಾನ್ಸ್​ಟೇಬಲ್, ಕಾನ್ಸ್​ಟೇಬಲ್​ಗಳ ಜೊತೆಗೂ ಸಂವಹನ ನಡೆಸಿ. ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರ ಜೊತೆ ಚರ್ಚೆ ನಡೆಸಬೇಕು. ಕಮಿಷನರ್, ಎಸ್​ಪಿ ವಾರದಲ್ಲಿ ಒಂದು ದಿನ ನೈಟ್​ ರೌಂಡ್ಸ್ ಮಾಡಬೇಕು. ನೈಟ್​ ಬೀಟ್​ ಸಿಬ್ಬಂದಿ ಕಾರ್ಯವೈಖರಿ ಪರಿಶೀಲಿಸಲು ದಿಢೀರ್ ಭೇಟಿ ನೀಡಿ ಎಂದು ತಿಳಿಸಿದ್ದಾರೆ.

- Advertisement -

ಕರ್ನಾಟಕದ ನೂತನ ಡಿಜಿ ಹಾಗೂ ಐಜಿಪಿಯಾಗಿ ಅಲೋಕ್ ಮೋಹನ್​ ಅವರು ಮೇ ತಿಂಗಳಲ್ಲಿ ಅಧಿಕಾರ ಸ್ವೀಕರಿಸಿದ್ದರು. ಬಿಹಾರ ಮೂಲದ ಡಾ. ಅಲೋಕ್ ಮೋಹನ್ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದಾರೆ. ಇವರು 1987ನೇ ಬ್ಯಾಚ್​​ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, 36 ವರ್ಷಗಳಿಂದ ಸುದೀರ್ಘ ಸೇವೆ ಸಲ್ಲಿಸುತ್ತಿದ್ದಾರೆ.

ಅವರು ಈ ಮೊದಲು ಅಗ್ನಿಶಾಮಕ ದಳ, ತುರ್ತು ಸೇವೆಗಳ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕಾರಾಗೃಹ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ. 2025ರ ಏಪ್ರಿಲ್​ನಲ್ಲಿ ನಿವೃತ್ತರಾಗಲಿದ್ದಾರೆ.

Join Whatsapp