ಸಿನಿಮಾ ಆಗಲಿದೆ ಧರ್ಮಸ್ಥಳ ಸೌಜನ್ಯ ಪ್ರಕರಣ: ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ

Prasthutha|

ಮಂಗಳೂರು: 2012ರಲ್ಲಿ ಹಂತಕರ ಕುಕೃತ್ಯಕ್ಕೆ ಬಲಿಯಾದ ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ಆಧರಿಸಿ ಸಿನಿಮಾ ಮಾಡಲು ಜೆ.ಕೆ ವೆಂಚರ್ಸ್ ಮುಂದಾಗಿದೆ ಎಂದು ತಿಳಿದು ಬಂದಿದೆ.

- Advertisement -


ಸೌಜನ್ಯ ಅವರ ಜೀವನ ಆಧರಿಸಿ ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ. ಜಿಕೆ ವೆಂಚರ್ಸ್ ಈ ಟೈಟಲ್ ನೋಂದಣಿ ಮಾಡಿಸಿದೆ. ವಿ. ಲವ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಾಮಾಜಿಕ ಕಥಾ ಹಂದರ ಹೊಂದಿರಲಿದೆ. ಈ ಚಿತ್ರ ಕನ್ನಡದಲ್ಲಿ ಮಾತ್ರ ಸಿದ್ಧವಾಗಲಿದೆ.

2012ರ ಅಕ್ಟೋಬರ್ 9ರಂದು ಸೌಜನ್ಯಳನ್ನು ದುರುಳರು ಅಪಹರಿಸಿ, ಅತ್ಯಾಚಾರಗೈದು, ಕೊಲೆ ಮಾಡಿದ್ದರು. ಪ್ರಕರಣದಲ್ಲಿ ಅಮಾಯಕನೊಬ್ಬನನ್ನು ಪೊಲೀಸರು ಬಂಧಿಸಿದ್ದರು. ಕಳೆದ ತಿಂಗಳು (ಜೂನ್) 16ರಂದು ಆತ ನಿರಪರಾಧಿಯೆಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ.

Join Whatsapp