ವಿಧಾನಪರಿಷತ್ ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ | ಜಿ.ಟಿ. ದೇವೇಗೌಡ ಸಂತಾಪ

Prasthutha|

ಮೈಸೂರು : ಜೆಡಿಎಸ್ ನಾಯಕ, ವಿಧಾನ ಪರಿಷತ್ ನ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ರಾಜ್ಯಾದ್ಯಂತ ಅಸಂಖ್ಯಾತ ಜನರಿಗೆ ಆಘಾತವನ್ನುಂಟು ಮಾಡಿದೆ. ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು ಧರ್ಮೇಗೌಡ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

- Advertisement -

ನನ್ನ ಸ್ನೇಹಿತರು ಹಾಗೂ ಸಹಕಾರಿಗಳಾದ ವಿಧಾನ ಪರಿಷತ್ ನ ಉಪ ಸಭಾಪತಿಗಳು ಎಸ್. ಎಲ್. ಧರ್ಮೇಗೌಡ ಅವರ ಅಕಾಲಿಕ ಸಾವಿನ ಸುದ್ದಿ ನಿಜಕ್ಕೂ ಆಘಾತವನ್ನು ಉಂಟುಮಾಡಿದೆ. ಅವರ ನಿಧನ ನನಗೆ ವೈಯುಕ್ತಿಕವಾಗಿ ತೀರಾ ಬೇಸರವನ್ನುಂಟು ಮಾಡಿದೆ. ಧರ್ಮೇಗೌಡರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಜಿ.ಟಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ.

ಧರ್ಮೇಗೌಡರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಕಡೂರಿನ ಸಖರಾಯಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಅಂತಿಮ ದರ್ಶನದ ಬಳಿಕ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.  

Join Whatsapp